ಕೋವಿಡ್–19 ಎರಡನೇ ಅಲೆಯಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತು ಚರ್ಚಿಸಲು ನಡೆದ ಕೇಂದ್ರ ಮಂತ್ರಿ ಪರಿಷತ್ನ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,‘ ಈ ಸಾಂಕ್ರಾಮಿಕ ರೋಗವು, ಶತಮಾನದಲ್ಲಿ ಒಮ್ಮೆ ಬರುವ ಬಿಕ್ಕಟ್ಟಾಗಿದ್ದು,, ಜಾಗತಿಕ ಮಟ್ಟದಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೇಂದ್ರ ಸಚಿವರು ಸ್ಥಳೀಯ ಮಟ್ಟದಲ್ಲಿ ಜನರೊಂದಿಗೆ ಸಂಪರ್ಕದಲ್ಲಿದ್ದು, ಸಮಸ್ಯೆಗಳನ್ನು ಗುರುತಿಸಿ ಸಹಾಯ ಮಾಡಬೇಕು. ಅವರಿಂದ ಪ್ರತಿಕ್ರಿಯೆ ಪಡೆಯಬೇಕು. ಅಲ್ಲದೇ, ಈ ಸಮಸ್ಯೆಗಳು ತ್ವರಿತವಾಗಿ ಪರಿಹಾರವಾಗಿವೆಯೇ ಎಂಬುದನ್ನೂ ಖಚಿತ ಪಡಿಸಿಕೊಳ್ಳಬೇಕು’ ಎಂದು ಒತ್ತಿ ಹೇಳಿದರು.