2019ರಲ್ಲಿ ರಾಹುಲ್ ಗಾಂಧಿ ಮಾನಹಾನಿಕರ ಹೇಳಿಕೆ ನೀಡಿದ್ದರು. ಅದಕ್ಕಾಗಿ ಶಿಕ್ಷೆಯಾಗಿದೆ. ಗುಜರಾತ್ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾದ ಕೂಡಲೇ ಕಾಂಗ್ರೆಸ್ ಪರ ವಕೀಲರು ತಡೆ ಕೋರಿ ಮನವಿ ಸಲ್ಲಿಸಲಿಲ್ಲ. ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆ ಲಾಭಕ್ಕಾಗಿ ಕಾಂಗ್ರೆಸ್ ಹಾಗೆ ನಡೆದುಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.
ಮಾನನಷ್ಟ ಮೊಕದ್ದಮೆಗೆ ಕಾರಣವಾದ ಮೋದಿ ಉಪನಾಮದ ಬಗ್ಗೆ ಮಾತನಾಡಿದ ರವಿಶಂಕರ್, ರಾಹುಲ್ ಗಾಂಧಿಯವರು ವಿಷಯದ ಬಗ್ಗೆ ಮಾತನಾಡಿಲ್ಲ, ತಪ್ಪು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು. ಅದಕ್ಕಾಗಿಯೇ ಅವರಿಗೆ ಶಿಕ್ಷೆಯಾಗಿದೆ. ನಾನು ಚಿಂತನಾಶೀಲನಾಗಿಯೇ ಮಾತನಾಡುತ್ತೇನೆ ಎಂದು ರಾಹುಲ್ ಇಂದು ಹೇಳಿದ್ದಾರೆ. ಹಾಗಿದ್ದರೆ, ಅದರರ್ಥ 2019ರಲ್ಲಿ ಅವರು ನೀಡಿದ್ದ ಹೇಳಿಕೆಯೂ ಚಿಂತನಾಶೀಲವಾಗಿಯೇ ನೀಡಿದ್ದಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.