ರಫ್ತಿನ ಮೇಲೆ ಹೇರಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಗಣಿ ಸಚಿವಾಲಯವು ಸುಪ್ರೀಂಕೋರ್ಟ್ಗೆ ಮನವಿ ಮಾಡಿದ ಬೆನ್ನಲ್ಲೇ, ಉಕ್ಕು ಸಚಿವಾಲಯದಿಂದ ಇಂಥದೇ ಬೇಡಿಕೆ ವ್ಯಕ್ತವಾಗಿದೆ. ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠವು ಈ ವಿಷಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸೋಮವಾರ (ಏ.18) ನಡೆಸಲಿದೆ.