<p><strong>ನವದೆಹಲಿ: </strong>ಕರ್ನಾಟಕದಿಂದ ಕಬ್ಬಿಣ ಅದಿರು ರಫ್ತಿನ ಮೇಲೆ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕು ಎಂಬ ಬೇಡಿಕೆಗೆ ಉಕ್ಕು ಸಚಿವಾಲಯ ಬೆಂಬಲ ಸೂಚಿಸಿದೆ.</p>.<p>ರಫ್ತಿನ ಮೇಲೆ ಹೇರಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಗಣಿ ಸಚಿವಾಲಯವು ಸುಪ್ರೀಂಕೋರ್ಟ್ಗೆ ಮನವಿ ಮಾಡಿದ ಬೆನ್ನಲ್ಲೇ, ಉಕ್ಕು ಸಚಿವಾಲಯದಿಂದ ಇಂಥದೇ ಬೇಡಿಕೆ ವ್ಯಕ್ತವಾಗಿದೆ. ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠವು ಈ ವಿಷಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸೋಮವಾರ (ಏ.18) ನಡೆಸಲಿದೆ.</p>.<p>ಇತರ ರಾಜ್ಯಗಳು ಹಾಗೂ ಕರ್ನಾಟಕದಲ್ಲಿರುವ ಕಬ್ಬಿಣ ಅದಿರು ಗಣಿಗಳ ನಡುವಿನ ತಾರತಮ್ಯ ಕೊನೆಗಾಣಿಸಬೇಕು ಎಂದುಉಕ್ಕು ಸಚಿವಾಲಯವು ಸುಪ್ರೀಂಕೋರ್ಟ್ಗೆ ಮನವಿ ಮಾಡಿದೆ. ಹೀಗೆ ಮಾಡುವುದರಿಂದ ಕರ್ನಾಟಕದ ಗಣಿಗಳಿಂದ ಹೊರತೆಗೆಯಲಾದ ಅದಿರನ್ನು ಇತರ ರಾಜ್ಯಗಳಿಗೆ ಮಾರಾಟ ಮಾಡಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.</p>.<p>ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕಬ್ಬಿಣ ಅದಿರಿನ ಗಣಿಗಾರಿಕೆ ಮೇಲೆ ಮಿತಿ ಹೇರಿ ನೀಡಿರುವ ಆದೇಶವನ್ನು ತೆರವುಗೊಳಿಸಬೇಕು. ಇದರಿಂದ ಅಗತ್ಯ ಪ್ರಮಾಣದ ಅದಿರು ಲಭ್ಯವಾಗುವುದನ್ನು ಖಾತ್ರಿಪಡಿಸಿದಂತಾಗುವುದು ಎಂದೂ ಸಚಿವಾಲಯವು ಸುಪ್ರೀಂಕೋರ್ಟ್ಗೆ ತಿಳಿಸಿದೆ.</p>.<p>ಅದಿರಿನ ರಫ್ತಿನ ಮೇಲೆ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕು ಎಂಬ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿಗಣಿ ಸಚಿವಾಲಯ ಸಲ್ಲಿಸಿದ್ದ ಅರ್ಜಿಯನ್ನು ಸ್ವಯಂಸೇವಾ ಸಂಸ್ಥೆ ಸಮಾಜ ಪರಿವರ್ತನಾ ಸಮುದಾಯ ವಿರೋಧಿಸಿತ್ತು. ಈ ಬೇಡಿಕೆ ಬಗ್ಗೆ ಉಕ್ಕು ಸಚಿವಾಲಯ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಸಂಸ್ಥೆ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕರ್ನಾಟಕದಿಂದ ಕಬ್ಬಿಣ ಅದಿರು ರಫ್ತಿನ ಮೇಲೆ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕು ಎಂಬ ಬೇಡಿಕೆಗೆ ಉಕ್ಕು ಸಚಿವಾಲಯ ಬೆಂಬಲ ಸೂಚಿಸಿದೆ.</p>.<p>ರಫ್ತಿನ ಮೇಲೆ ಹೇರಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಗಣಿ ಸಚಿವಾಲಯವು ಸುಪ್ರೀಂಕೋರ್ಟ್ಗೆ ಮನವಿ ಮಾಡಿದ ಬೆನ್ನಲ್ಲೇ, ಉಕ್ಕು ಸಚಿವಾಲಯದಿಂದ ಇಂಥದೇ ಬೇಡಿಕೆ ವ್ಯಕ್ತವಾಗಿದೆ. ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠವು ಈ ವಿಷಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸೋಮವಾರ (ಏ.18) ನಡೆಸಲಿದೆ.</p>.<p>ಇತರ ರಾಜ್ಯಗಳು ಹಾಗೂ ಕರ್ನಾಟಕದಲ್ಲಿರುವ ಕಬ್ಬಿಣ ಅದಿರು ಗಣಿಗಳ ನಡುವಿನ ತಾರತಮ್ಯ ಕೊನೆಗಾಣಿಸಬೇಕು ಎಂದುಉಕ್ಕು ಸಚಿವಾಲಯವು ಸುಪ್ರೀಂಕೋರ್ಟ್ಗೆ ಮನವಿ ಮಾಡಿದೆ. ಹೀಗೆ ಮಾಡುವುದರಿಂದ ಕರ್ನಾಟಕದ ಗಣಿಗಳಿಂದ ಹೊರತೆಗೆಯಲಾದ ಅದಿರನ್ನು ಇತರ ರಾಜ್ಯಗಳಿಗೆ ಮಾರಾಟ ಮಾಡಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.</p>.<p>ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕಬ್ಬಿಣ ಅದಿರಿನ ಗಣಿಗಾರಿಕೆ ಮೇಲೆ ಮಿತಿ ಹೇರಿ ನೀಡಿರುವ ಆದೇಶವನ್ನು ತೆರವುಗೊಳಿಸಬೇಕು. ಇದರಿಂದ ಅಗತ್ಯ ಪ್ರಮಾಣದ ಅದಿರು ಲಭ್ಯವಾಗುವುದನ್ನು ಖಾತ್ರಿಪಡಿಸಿದಂತಾಗುವುದು ಎಂದೂ ಸಚಿವಾಲಯವು ಸುಪ್ರೀಂಕೋರ್ಟ್ಗೆ ತಿಳಿಸಿದೆ.</p>.<p>ಅದಿರಿನ ರಫ್ತಿನ ಮೇಲೆ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕು ಎಂಬ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿಗಣಿ ಸಚಿವಾಲಯ ಸಲ್ಲಿಸಿದ್ದ ಅರ್ಜಿಯನ್ನು ಸ್ವಯಂಸೇವಾ ಸಂಸ್ಥೆ ಸಮಾಜ ಪರಿವರ್ತನಾ ಸಮುದಾಯ ವಿರೋಧಿಸಿತ್ತು. ಈ ಬೇಡಿಕೆ ಬಗ್ಗೆ ಉಕ್ಕು ಸಚಿವಾಲಯ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಸಂಸ್ಥೆ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>