ನವದೆಹಲಿ: ರಾಜ್ಯದಲ್ಲಿ ಕೋವಿಡ್–19 ಪ್ರಕರಣಗಳು ಹಾಗೂ ಕೋವಿಡ್ನಿಂದಾಗಿ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಕಾರಣ, ಕೂಡಲೇ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.
ಅದರಲ್ಲೂ, ಮುಂಬರುವ ಹಬ್ಬಗಳ ವೇಳೆ ಕೋವಿಡ್ ಮಾರ್ಗಸೂಚಿಗಳು ಪಾಲನೆಯಾಗುವುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಪಶ್ಚಿಮ ಬಂಗಾಳ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಸೂಚಿಸಿದ್ದಾರೆ.
ಅಧ್ಯಯನ: ‘ಕೊರೊನಾ ವೈರಸ್ ಡೆಲ್ಟಾದ ಉಪತಳಿ ಎವೈ.4.2 ನ ತೀವ್ರತೆ ಕುರಿತು ತಜ್ಞರ ತಂಡ ಅಧ್ಯಯನ ನಡೆಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಮಂಗಳವಾರ ಹೇಳಿದ್ದಾರೆ.
ಈ ತಳಿಯ ಸೋಂಕಿನ ಪ್ರಕರಣಗಳು ಬ್ರಿಟನ್ನಲ್ಲಿ ಪತ್ತೆಯಾಗಿವೆ.