‘ಅಯೋಧ್ಯೆಯ ರಾಮ ಮಂದಿರಕ್ಕಾಗಿ ಸೀತಾ ಎಲಿಯಾದಿಂದ ಶಿಲೆಯನ್ನು ನೀಡಲಾಗುವುದು. ಮಯೂರಪತಿ ಅಮ್ಮನ್ ದೇವಸ್ಥಾನದಲ್ಲಿ ಶ್ರೀಲಂಕಾದ ಹೈ ಕಮಿಷನರ್ ಮಿಲಿಂದ ಮೊರಗೋಡ ಅವರು ಈ ಶಿಲೆಯನ್ನು ಸ್ವೀಕರಿಸಿದರು. ಇದು ಭಾರತ ಮತ್ತು ಶ್ರೀಲಂಕಾದ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲಿದೆ’ ಎಂದು ಶ್ರೀಲಂಕಾದಲ್ಲಿರುವ ಭಾರತದ ಹೈಕಮಿಷನ್ ಟ್ವೀಟ್ ಮಾಡಿದೆ.