'ಪ್ರತಿಭಟನೆ ವೇಳೆ ಹೊರಗೆ ನಿಂತಿದ್ದ ವಿಜಯ ದಾಸ್ ಹೆಸರಿನ ಸ್ವಾಮೀಜಿ ಇದ್ದಕ್ಕಿದ್ದಂತೆ ಬೆಂಕಿ ಹಚ್ಚಿಕೊಂಡರು. ತಕ್ಷಣ ರಕ್ಷಣೆಗೆ ಧಾವಿಸಿದ ಪೊಲೀಸರು ಕಂಬಳಿಯನ್ನು ಹೊದಿಸಿ ಬೆಂಕಿಯನ್ನು ಆರಿಸಲು ಯತ್ನಿಸಿದರು. ಗಾಯಗೊಂಡಿರುವ ಸ್ವಾಮೀಜಿಯನ್ನು ಭಾರತ್ಪುರ ಆಸ್ಪತ್ರೆಗೆ ಸಾಗಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.