ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಡ್ಡಾ ಬೆಂಗಾವಲು ಪಡೆಯ ಮೇಲಿನ ದಾಳಿ ಯೋಜಿತ ಕೃತ್ಯ ಇರಬಹುದು: ಮಮತಾ ಬ್ಯಾನರ್ಜಿ

Last Updated 10 ಡಿಸೆಂಬರ್ 2020, 14:44 IST
ಅಕ್ಷರ ಗಾತ್ರ

ಕೋಲ್ಕತ್ತಾ: ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿ ಯೋಜಿತ ಕೃತ್ಯ ಇರಬಹುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಶಯ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಗುರುವಾರ ಪ್ರತಿಕ್ರಿಯಿಸಿರುವ ಅವರು,'ನಿಮ್ಮೊಂದಿಗೆ ಕೇಂದ್ರ ಭದ್ರತಾ ಪಡೆ ಇದೆ. ಯಾರಾದರೂ ನಿಮ್ಮ ಮೇಲೆ ಹೇಗೆ ದಾಳಿ ಮಾಡಬಹುದು?' ಎಂದು ನಡ್ಡಾ ಅವರನ್ನು ಪ್ರಶ್ನಿಸಿದ್ದಾರೆ.

'ನೀವು ರಾಜ್ಯದ ಭದ್ರತಾ ಪಡೆಗಳನ್ನು ಅವಲಂಬಿಸುವ ಬದಲು, ಕೇಂದ್ರದ ಭದ್ರತಾ ಪಡೆಗಳನ್ನು ಅವಲಂಬಿಸಿದ್ದೀರಿ. ಈ ದಾಳಿಯು ಯೋಜಿತ ಕೃತ್ಯ ಇರಬಹುದು. ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ. ಆದರೆ, ನಾನು ಎಂದಿಗೂ ಸುಳ್ಳನ್ನು ಹೇಳುವುದಿಲ್ಲ' ಎಂದು ಮಮತಾ ಹೇಳಿದ್ದಾರೆ.

ಕೋಲ್ಕತ್ತಾದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಕಾರಿನ ಮೇಲೂ ದಾಳಿ ಮಾಡಲಾಯಿತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT