<p><strong>ಕೋಲ್ಕತ್ತಾ</strong>: ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿ ಯೋಜಿತ ಕೃತ್ಯ ಇರಬಹುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಶಯ ವ್ಯಕ್ತಪಡಿಸಿದ್ದಾರೆ.</p>.<p>ಈ ವಿಚಾರವಾಗಿ ಗುರುವಾರ ಪ್ರತಿಕ್ರಿಯಿಸಿರುವ ಅವರು,'ನಿಮ್ಮೊಂದಿಗೆ ಕೇಂದ್ರ ಭದ್ರತಾ ಪಡೆ ಇದೆ. ಯಾರಾದರೂ ನಿಮ್ಮ ಮೇಲೆ ಹೇಗೆ ದಾಳಿ ಮಾಡಬಹುದು?' ಎಂದು ನಡ್ಡಾ ಅವರನ್ನು ಪ್ರಶ್ನಿಸಿದ್ದಾರೆ.</p>.<p>'ನೀವು ರಾಜ್ಯದ ಭದ್ರತಾ ಪಡೆಗಳನ್ನು ಅವಲಂಬಿಸುವ ಬದಲು, ಕೇಂದ್ರದ ಭದ್ರತಾ ಪಡೆಗಳನ್ನು ಅವಲಂಬಿಸಿದ್ದೀರಿ. ಈ ದಾಳಿಯು ಯೋಜಿತ ಕೃತ್ಯ ಇರಬಹುದು. ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ. ಆದರೆ, ನಾನು ಎಂದಿಗೂ ಸುಳ್ಳನ್ನು ಹೇಳುವುದಿಲ್ಲ' ಎಂದು ಮಮತಾ ಹೇಳಿದ್ದಾರೆ.</p>.<p>ಕೋಲ್ಕತ್ತಾದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ.</p>.<p>ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಕಾರಿನ ಮೇಲೂ ದಾಳಿ ಮಾಡಲಾಯಿತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತಾ</strong>: ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿ ಯೋಜಿತ ಕೃತ್ಯ ಇರಬಹುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಶಯ ವ್ಯಕ್ತಪಡಿಸಿದ್ದಾರೆ.</p>.<p>ಈ ವಿಚಾರವಾಗಿ ಗುರುವಾರ ಪ್ರತಿಕ್ರಿಯಿಸಿರುವ ಅವರು,'ನಿಮ್ಮೊಂದಿಗೆ ಕೇಂದ್ರ ಭದ್ರತಾ ಪಡೆ ಇದೆ. ಯಾರಾದರೂ ನಿಮ್ಮ ಮೇಲೆ ಹೇಗೆ ದಾಳಿ ಮಾಡಬಹುದು?' ಎಂದು ನಡ್ಡಾ ಅವರನ್ನು ಪ್ರಶ್ನಿಸಿದ್ದಾರೆ.</p>.<p>'ನೀವು ರಾಜ್ಯದ ಭದ್ರತಾ ಪಡೆಗಳನ್ನು ಅವಲಂಬಿಸುವ ಬದಲು, ಕೇಂದ್ರದ ಭದ್ರತಾ ಪಡೆಗಳನ್ನು ಅವಲಂಬಿಸಿದ್ದೀರಿ. ಈ ದಾಳಿಯು ಯೋಜಿತ ಕೃತ್ಯ ಇರಬಹುದು. ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ. ಆದರೆ, ನಾನು ಎಂದಿಗೂ ಸುಳ್ಳನ್ನು ಹೇಳುವುದಿಲ್ಲ' ಎಂದು ಮಮತಾ ಹೇಳಿದ್ದಾರೆ.</p>.<p>ಕೋಲ್ಕತ್ತಾದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ.</p>.<p>ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಕಾರಿನ ಮೇಲೂ ದಾಳಿ ಮಾಡಲಾಯಿತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>