<p><strong>ಕೋಲ್ಕತ್ತ:</strong> ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಪಶ್ಚಿಮ ಬಂಗಾಳದ ಹೌರಾದಲ್ಲಿ ತಮ್ಮ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎಂದು ಬಿಜೆಪಿ ನಾಯಕ ಶಹನವಾಜ್ ಹುಸೇನ್ ಆರೋಪಿಸಿದ್ದಾರೆ.</p>.<p>‘ಮಜಾಫರ್ ಚೌಕ್ನಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಟಿಎಂಸಿ ಕಾರ್ಯಕರ್ತರು ನನ್ನ ಮೇಲೆ ಕಲ್ಲೆಸೆದಿದ್ದಾರೆ. ನಾನು ಸುರಕ್ಷಿತವಾಗಿದ್ದೇನೆ. ಈ ಕುರಿತು ಪಕ್ಷದ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ’ ಎಂದು ಶಹನವಾಜ್ ಹುಸೇನ್ ಟ್ವೀಟ್ ಮಾಡಿದ್ದಾರೆ.</p>.<p>‘ಸೋಲು ಖಚಿತ ಎಂದು ಟಿಎಂಸಿಗೆ ಅರಿವಾಗಿದ್ದು, ಹತಾಶೆಗೊಂಡಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ನಾನು ವೈ ಪ್ಲಸ್ ಸಿಆರ್ಪಿಎಫ್ ಭದ್ರತೆ ವ್ಯಾಪ್ತಿಗೆ ಒಳಪಟ್ಟಿದ್ದು ಅದರಂತೆ ಪೊಲೀಸ್ ಸಿಬ್ಬಂದಿಯನ್ನು ಯಾಕೆ ನಿಯೋಜಿಸಿಲ್ಲ ಎಂದು ಗೊಲಬಾರಿ ಪೊಲೀಸ್ ಠಾಣೆಗೆ ತೆರಳಿ ವಿಚಾರಿಸಿದೆ. ಅವರ ಬಳಿ ಉತ್ತರವಿರಲಿಲ್ಲ’ ಎಂದೂ ಹುಸೇನ್ ಹೇಳಿದ್ದಾರೆ.</p>.<p>ಉತ್ತರ ಹೌರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ರೈ ಸಹ ದೂರು ನೀಡಿದ್ದು, ಕೆಲವು ವ್ಯಕ್ತಿಗಳನ್ನು ದೂರಿನಲ್ಲಿ ಹೆಸರಿಸಿದ್ದಾರೆ. ಅವರೆಲ್ಲ ಟಿಎಂಸಿಗೆ ಸೇರಿದವರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಪಶ್ಚಿಮ ಬಂಗಾಳದ ಹೌರಾದಲ್ಲಿ ತಮ್ಮ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎಂದು ಬಿಜೆಪಿ ನಾಯಕ ಶಹನವಾಜ್ ಹುಸೇನ್ ಆರೋಪಿಸಿದ್ದಾರೆ.</p>.<p>‘ಮಜಾಫರ್ ಚೌಕ್ನಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಟಿಎಂಸಿ ಕಾರ್ಯಕರ್ತರು ನನ್ನ ಮೇಲೆ ಕಲ್ಲೆಸೆದಿದ್ದಾರೆ. ನಾನು ಸುರಕ್ಷಿತವಾಗಿದ್ದೇನೆ. ಈ ಕುರಿತು ಪಕ್ಷದ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ’ ಎಂದು ಶಹನವಾಜ್ ಹುಸೇನ್ ಟ್ವೀಟ್ ಮಾಡಿದ್ದಾರೆ.</p>.<p>‘ಸೋಲು ಖಚಿತ ಎಂದು ಟಿಎಂಸಿಗೆ ಅರಿವಾಗಿದ್ದು, ಹತಾಶೆಗೊಂಡಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ನಾನು ವೈ ಪ್ಲಸ್ ಸಿಆರ್ಪಿಎಫ್ ಭದ್ರತೆ ವ್ಯಾಪ್ತಿಗೆ ಒಳಪಟ್ಟಿದ್ದು ಅದರಂತೆ ಪೊಲೀಸ್ ಸಿಬ್ಬಂದಿಯನ್ನು ಯಾಕೆ ನಿಯೋಜಿಸಿಲ್ಲ ಎಂದು ಗೊಲಬಾರಿ ಪೊಲೀಸ್ ಠಾಣೆಗೆ ತೆರಳಿ ವಿಚಾರಿಸಿದೆ. ಅವರ ಬಳಿ ಉತ್ತರವಿರಲಿಲ್ಲ’ ಎಂದೂ ಹುಸೇನ್ ಹೇಳಿದ್ದಾರೆ.</p>.<p>ಉತ್ತರ ಹೌರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ರೈ ಸಹ ದೂರು ನೀಡಿದ್ದು, ಕೆಲವು ವ್ಯಕ್ತಿಗಳನ್ನು ದೂರಿನಲ್ಲಿ ಹೆಸರಿಸಿದ್ದಾರೆ. ಅವರೆಲ್ಲ ಟಿಎಂಸಿಗೆ ಸೇರಿದವರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>