<p><strong>ದೆಹಲಿ:</strong> ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಿರುವ ಸಂಭಾವ್ಯ ಅಪಾಯ ಮತ್ತು ಪೊಲೀಸರ ಮೂಲಕ ಬೆದರಿಸುವ ತಂತ್ರದ ಕುರಿತು ಟ್ವಿಟರ್ ಆತಂಕ ವ್ಯಕ್ತಪಡಿಸಿ ಗುರುವಾರ ಹೇಳಿಕೆ ಬಿಡುಗಡೆ ಮಾಡಿತ್ತು. ಇದರ ಬೆನ್ನಿಗೇ, ಟ್ವಿಟರ್ಗೆ ಕೇಂದ್ರ ಸರ್ಕಾರ ತಿರುಗೇಟು ನೀಡಿದೆ. ಈ ನೆಲದ ಕಾನೂನನ್ನು ಪಾಲಿಸುವಂತೆ ತಾಕೀತು ಮಾಡಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/technology/social-media/twitter-concerned-for-india-employees-after-police-visit-will-continue-dialogue-with-government-new-833771.html" target="_blank">ಕಚೇರಿಗೆ ಪೊಲೀಸರ ಭೇಟಿ; ಭಾರತದ ಸಿಬ್ಬಂದಿ ಸುರಕ್ಷತೆಯ ಬಗ್ಗೆ ಟ್ವಿಟರ್ ಕಳವಳ</a></p>.<p>ದೇಶದ ಕಾನೂನನ್ನು ಪಾಲಿಸಲು ಶ್ರಮಿಸುವುದಾಗಿ ತನ್ನ ಹೇಳಿಕೆಯಲ್ಲಿ ತಿಳಿಸಿದ್ದ ಟ್ವಿಟರ್, ಸರ್ಕಾರದ ನಿಯಮದಲ್ಲಿರುವ ಮುಕ್ತ ಸಂವಹನ ತಡೆಯುವ ಅಂಶಗಳನ್ನು ಬದಲಿಸುವಂತೆ ಕೇಳುವುದಾಗಿ ತಿಳಿಸಿತ್ತು.</p>.<p>ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, 'ಟ್ವಿಟರ್ ಈ ನೆಲದ ಕಾನೂನನ್ನು ಪಾಲಿಸಬೇಕು. ಕಾನೂನು ಮತ್ತು ನೀತಿ ನಿರೂಪಣೆ ಎಂಬುದು ಇಲ್ಲಿನ ಸಾರ್ವಭೌಮತ್ವದ ಪರಮಾಧಿಕಾರ. ಟ್ವಿಟರ್ ಒಂದು ಸಾಮಾಜಿಕ ಮಾಧ್ಯಮವಷ್ಟೇ. ಭಾರತದ ಕಾನೂನಿನ ಚೌಕಟ್ಟು ಹೇಗಿರಬೇಕು ಎಂದು ನಿರ್ಧರಿಸುವಲ್ಲಿ ಟ್ವಿಟರ್ಗೆ ಯಾವುದೇ ಪಾತ್ರವಿಲ್ಲ,' ಎಂದು ಮನವರಿಕೆ ಮಾಡಿಕೊಟ್ಟಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/toolkit-case-congress-writes-to-twitter-seeks-%E2%80%98manipulated-media%E2%80%99-tag-for-tweets-by-union-ministers-833351.html">ಕೇಂದ್ರದ 11 ಸಚಿವರ ಟ್ವೀಟ್ಗೆ ‘ತಿರುಚಿದ ಮಾಹಿತಿ’ ಹಣೆಪಟ್ಟಿ ಅಂಟಿಸಿ: ಕಾಂಗ್ರೆಸ್</a></p>.<p>ಟ್ವಿಟರ್ ಕಚೇರಿಗೆ ಪೊಲೀಸರು ಭೇಟಿ ನೀಡಿದ ವಿಚಾರವನ್ನು ಪ್ರಸ್ತಾಪಿಸಿ, ಭಾರತದಲ್ಲಿನ ತನ್ನ ಸಿಬ್ಬಂದಿಗಳ ಭದ್ರತೆ ಸುರಕ್ಷತೆ ಬಗ್ಗೆ ಟ್ವಿಟರ್ ವ್ಯಕ್ತಪಡಿಸಿದ್ದ ಆತಂಕಕ್ಕೂ ಸರ್ಕಾರ ಉತ್ತರ ನೀಡಿದೆ. ' ಟ್ವಿಟರ್ ಸೇರಿದಂತೆ ಸಾಮಾಜಿಕ ಮಾಧ್ಯಮ ಕಂಪನಿಗಳ ಪ್ರತಿನಿಧಿಗಳು ಭಾರತದಲ್ಲಿ ಸದಾ ಸುರಕ್ಷಿತವಾಗಿರುತ್ತಾರೆ. ಅವರ ಭದ್ರತೆ ಮತ್ತು ಸುರಕ್ಷತೆಗೆ ಯಾವುದೇ ತೊಂದರೆ ಇಲ್ಲ ಎಂಬ ದೃಢ ಭರವಸೆ ನೀಡಲು ಬಯಸುತ್ತೇವೆ,' ಎಂದು ಸರ್ಕಾರ ತಿಳಿಸಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/technology/social-media/indian-police-visit-twitter-office-to-serve-notice-about-inquiry-833080.html" target="_blank">ಸಂಬಿತ್ ಪಾತ್ರಾ ಪ್ರಕರಣ: ನೋಟಿಸ್ ನೀಡಲು ಟ್ವಿಟರ್ ಕಚೇರಿಗೆ ತೆರಳಿದ್ದ ಪೊಲೀಸರು</a></p>.<p>ಕೇಂದ್ರದ ವಿರುದ್ಧ ರೂಪಿಸಲಾದದ್ದು ಎನ್ನಲಾದ ಟೂಲ್ಕಿಟ್ಗೆ ಸಂಬಂಧಿಸಿದ ವಿಚಾರಣೆಯಲ್ಲಿ ಪಾಲ್ಗೊಳ್ಳುವಂತೆ ಟ್ವಿಟರ್ನ ಕಾರ್ಯನಿರ್ವಾಹಕರನ್ನು ಕೇಳಿದ್ದ ದೆಹಲಿ ಪೊಲೀಸರು, ನೋಟಿಸ್ ನೀಡಲು ಇತ್ತೀಚೆಗೆ ದೆಹಲಿ ಮತ್ತು ಗುರುಗ್ರಾಮದ ಟ್ವಿಟರ್ ಕಚೇರಿಗೆ ತೆರಳಿದ್ದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಟ್ವಿಟರ್ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ತನ್ನ ಸಂಸ್ಥೆಯ ಉದ್ಯೋಗಿಗಳ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿ ಗುರುವಾರ ಹೇಳಿಕೆ ಬಿಡುಗಡೆ ಮಾಡಿತ್ತು.</p>.<p><strong>ಇದನ್ನೂ ಓದಿ:</strong><a href="https://www.prajavani.net/explainer/toolkit-issue-between-bjp-and-congress-indian-politics-832124.html" target="_blank">ಆಳ–ಅಗಲ: ಬಿಜೆಪಿ ಕಾಂಗ್ರೆಸ್ ಟೂಲ್ಕಿಟ್ ಜಟಾಪಟಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೆಹಲಿ:</strong> ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಿರುವ ಸಂಭಾವ್ಯ ಅಪಾಯ ಮತ್ತು ಪೊಲೀಸರ ಮೂಲಕ ಬೆದರಿಸುವ ತಂತ್ರದ ಕುರಿತು ಟ್ವಿಟರ್ ಆತಂಕ ವ್ಯಕ್ತಪಡಿಸಿ ಗುರುವಾರ ಹೇಳಿಕೆ ಬಿಡುಗಡೆ ಮಾಡಿತ್ತು. ಇದರ ಬೆನ್ನಿಗೇ, ಟ್ವಿಟರ್ಗೆ ಕೇಂದ್ರ ಸರ್ಕಾರ ತಿರುಗೇಟು ನೀಡಿದೆ. ಈ ನೆಲದ ಕಾನೂನನ್ನು ಪಾಲಿಸುವಂತೆ ತಾಕೀತು ಮಾಡಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/technology/social-media/twitter-concerned-for-india-employees-after-police-visit-will-continue-dialogue-with-government-new-833771.html" target="_blank">ಕಚೇರಿಗೆ ಪೊಲೀಸರ ಭೇಟಿ; ಭಾರತದ ಸಿಬ್ಬಂದಿ ಸುರಕ್ಷತೆಯ ಬಗ್ಗೆ ಟ್ವಿಟರ್ ಕಳವಳ</a></p>.<p>ದೇಶದ ಕಾನೂನನ್ನು ಪಾಲಿಸಲು ಶ್ರಮಿಸುವುದಾಗಿ ತನ್ನ ಹೇಳಿಕೆಯಲ್ಲಿ ತಿಳಿಸಿದ್ದ ಟ್ವಿಟರ್, ಸರ್ಕಾರದ ನಿಯಮದಲ್ಲಿರುವ ಮುಕ್ತ ಸಂವಹನ ತಡೆಯುವ ಅಂಶಗಳನ್ನು ಬದಲಿಸುವಂತೆ ಕೇಳುವುದಾಗಿ ತಿಳಿಸಿತ್ತು.</p>.<p>ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, 'ಟ್ವಿಟರ್ ಈ ನೆಲದ ಕಾನೂನನ್ನು ಪಾಲಿಸಬೇಕು. ಕಾನೂನು ಮತ್ತು ನೀತಿ ನಿರೂಪಣೆ ಎಂಬುದು ಇಲ್ಲಿನ ಸಾರ್ವಭೌಮತ್ವದ ಪರಮಾಧಿಕಾರ. ಟ್ವಿಟರ್ ಒಂದು ಸಾಮಾಜಿಕ ಮಾಧ್ಯಮವಷ್ಟೇ. ಭಾರತದ ಕಾನೂನಿನ ಚೌಕಟ್ಟು ಹೇಗಿರಬೇಕು ಎಂದು ನಿರ್ಧರಿಸುವಲ್ಲಿ ಟ್ವಿಟರ್ಗೆ ಯಾವುದೇ ಪಾತ್ರವಿಲ್ಲ,' ಎಂದು ಮನವರಿಕೆ ಮಾಡಿಕೊಟ್ಟಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/toolkit-case-congress-writes-to-twitter-seeks-%E2%80%98manipulated-media%E2%80%99-tag-for-tweets-by-union-ministers-833351.html">ಕೇಂದ್ರದ 11 ಸಚಿವರ ಟ್ವೀಟ್ಗೆ ‘ತಿರುಚಿದ ಮಾಹಿತಿ’ ಹಣೆಪಟ್ಟಿ ಅಂಟಿಸಿ: ಕಾಂಗ್ರೆಸ್</a></p>.<p>ಟ್ವಿಟರ್ ಕಚೇರಿಗೆ ಪೊಲೀಸರು ಭೇಟಿ ನೀಡಿದ ವಿಚಾರವನ್ನು ಪ್ರಸ್ತಾಪಿಸಿ, ಭಾರತದಲ್ಲಿನ ತನ್ನ ಸಿಬ್ಬಂದಿಗಳ ಭದ್ರತೆ ಸುರಕ್ಷತೆ ಬಗ್ಗೆ ಟ್ವಿಟರ್ ವ್ಯಕ್ತಪಡಿಸಿದ್ದ ಆತಂಕಕ್ಕೂ ಸರ್ಕಾರ ಉತ್ತರ ನೀಡಿದೆ. ' ಟ್ವಿಟರ್ ಸೇರಿದಂತೆ ಸಾಮಾಜಿಕ ಮಾಧ್ಯಮ ಕಂಪನಿಗಳ ಪ್ರತಿನಿಧಿಗಳು ಭಾರತದಲ್ಲಿ ಸದಾ ಸುರಕ್ಷಿತವಾಗಿರುತ್ತಾರೆ. ಅವರ ಭದ್ರತೆ ಮತ್ತು ಸುರಕ್ಷತೆಗೆ ಯಾವುದೇ ತೊಂದರೆ ಇಲ್ಲ ಎಂಬ ದೃಢ ಭರವಸೆ ನೀಡಲು ಬಯಸುತ್ತೇವೆ,' ಎಂದು ಸರ್ಕಾರ ತಿಳಿಸಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/technology/social-media/indian-police-visit-twitter-office-to-serve-notice-about-inquiry-833080.html" target="_blank">ಸಂಬಿತ್ ಪಾತ್ರಾ ಪ್ರಕರಣ: ನೋಟಿಸ್ ನೀಡಲು ಟ್ವಿಟರ್ ಕಚೇರಿಗೆ ತೆರಳಿದ್ದ ಪೊಲೀಸರು</a></p>.<p>ಕೇಂದ್ರದ ವಿರುದ್ಧ ರೂಪಿಸಲಾದದ್ದು ಎನ್ನಲಾದ ಟೂಲ್ಕಿಟ್ಗೆ ಸಂಬಂಧಿಸಿದ ವಿಚಾರಣೆಯಲ್ಲಿ ಪಾಲ್ಗೊಳ್ಳುವಂತೆ ಟ್ವಿಟರ್ನ ಕಾರ್ಯನಿರ್ವಾಹಕರನ್ನು ಕೇಳಿದ್ದ ದೆಹಲಿ ಪೊಲೀಸರು, ನೋಟಿಸ್ ನೀಡಲು ಇತ್ತೀಚೆಗೆ ದೆಹಲಿ ಮತ್ತು ಗುರುಗ್ರಾಮದ ಟ್ವಿಟರ್ ಕಚೇರಿಗೆ ತೆರಳಿದ್ದರು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಟ್ವಿಟರ್ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ತನ್ನ ಸಂಸ್ಥೆಯ ಉದ್ಯೋಗಿಗಳ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿ ಗುರುವಾರ ಹೇಳಿಕೆ ಬಿಡುಗಡೆ ಮಾಡಿತ್ತು.</p>.<p><strong>ಇದನ್ನೂ ಓದಿ:</strong><a href="https://www.prajavani.net/explainer/toolkit-issue-between-bjp-and-congress-indian-politics-832124.html" target="_blank">ಆಳ–ಅಗಲ: ಬಿಜೆಪಿ ಕಾಂಗ್ರೆಸ್ ಟೂಲ್ಕಿಟ್ ಜಟಾಪಟಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>