<p><strong>ನವದೆಹಲಿ:</strong> ಮಾಟ-ಮಂತ್ರದಂತಹ ಮೂಢನಂಬಿಕೆಗಳ ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆಯ ಗೌರವವನ್ನು ಕಳೆಯಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಕಪ್ಪು ಬಟ್ಟೆಗಳನ್ನು ಧರಿಸುವುದನ್ನು ಮಾಟ-ಮಂತ್ರ, ವಾಮಾಚಾರದಂತಹ ಕೃತ್ಯಗಳಿಗೆ ಹೋಲಿಸಿ ಮೋದಿ ಟೀಕೆ ಮಾಡಿದ್ದರು.</p>.<p>ಪ್ರಧಾನಿ ಮೋದಿ ಅವರಿಗೆ ರಾಷ್ಟ್ರದಲ್ಲಿನ ಬೆಲೆ ಏರಿಕೆ ಅಥವಾ ನಿರುದ್ಯೋಗ ಪರಿಸ್ಥಿತಿ ಕಾಣಿಸುತ್ತಿಲ್ಲವೇ? ಎಂದು ರಾಹುಲ್ ಪ್ರಶ್ನಿಸಿದ್ದಾರೆ.</p>.<p>ಪ್ರಧಾನಿಯಾದವರು ಪ್ರಜೆಗಳ ಸಮಸ್ಯೆಗಳ ಬಗ್ಗೆ ಮಾತನಾಡಬೇಕು ಎಂದು ರಾಷ್ಟ್ರ ಬಯಸುತ್ತದೆ. ಆದರೆ ಈ 'ಜುಮ್ಲಾಜೀವಿ' ಏನೇನೋ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ಪಿಎಂ ಮೋದಿ ವಿರುದ್ಧ ಹರಿಹಾಯ್ದಿದೆ.</p>.<p>'ಪ್ರಧಾನ ಮಂತ್ರಿ ಅವರೇ ನಿಮ್ಮ ಕರಾಳತನವನ್ನು ಮಚ್ಚಿಕೊಳ್ಳಲು ಮಾಟ-ಮಂತ್ರದಂತಹ ಮೂಢನಂಬಿಕೆಗಳ ಬಗ್ಗೆ ಮಾತನಾಡುತ್ತ ರಾಷ್ಟ್ರದ ಜನತೆಯ ದಾರಿ ತಪ್ಪಿಸುವುದನ್ನು ನಿಲ್ಲಿಸಿ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಪ್ರಧಾನಿ ಹುದ್ದೆಯ ಗೌರವ ಕಳೆಯುವುದನ್ನು ನಿಲ್ಲಿಸಿ' ಎಂದು ರಾಹುಲ್ ಆಗ್ರಹಿಸಿದ್ದಾರೆ.</p>.<p>ಪಾನಿಪತ್ನಲ್ಲಿ 900 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ, ಎರಡನೇ ಎಥೆನಾಲ್ ಉತ್ಪಾದನಾ ಘಟಕವನ್ನು ಉದ್ಘಾಟಿಸಿ ಮಾತನಾಡಿದ ನರೇಂದ್ರ ಮೋದಿ, 'ಆಗಸ್ಟ್ 5ರಂದು ಕೆಲವರು ಹೇಗೆ ಮಾಟ-ಮಂತ್ರಗಳನ್ನು ಹರಡಲು ಪ್ರಯತ್ನಿಸಿದರು ಎಂಬುದನ್ನು ನೋಡಿದ್ದೇವೆ. ಕಪ್ಪು ಬಟ್ಟೆ ಧರಿಸಿದರೆ ಅವರ ಕೆಟ್ಟ ದಿನಗಳು ಕೊನೆಯಾಗುತ್ತವೆ ಎಂದು ಭಾವಿಸಿಕೊಂಡಿದ್ದಾರೆ. ಆದರೆ, ಮಾಟ-ಮಂತ್ರ, ವಾಮಾಚಾರದಂತಹ ಕೃತ್ಯಗಳಿಗೆ, ಮೌಢ್ಯಗಳಿಗೆ ಮೊರೆ ಹೋಗುವುದರಿಂದ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ ಎಂಬುದು ಅವರಿಗೆ ಗೊತ್ತಿಲ್ಲ' ಎಂದಿದ್ದರು.</p>.<p>ಬೆಲೆ ಏರಿಕೆ ವಿರುದ್ಧ ಆಗಸ್ಟ್ 5ರಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಸಂಸದರು, ಶಾಸಕರು ಹಾಗೂ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದರು.</p>.<p><a href="https://www.prajavani.net/india-news/whether-taxpayers-money-be-spent-on-public-welfare-or-ones-friends-arvind-kejriwal-demands-962277.html" itemprop="url">ತೆರಿಗೆ ದುಡ್ಡು ಯಾವುದಕ್ಕೆ ಬಳಕೆಯಾಗಬೇಕು?: ಜನಾಭಿಮತಕ್ಕೆ ಕೇಜ್ರಿವಾಲ್ ಒತ್ತಾಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಾಟ-ಮಂತ್ರದಂತಹ ಮೂಢನಂಬಿಕೆಗಳ ಬಗ್ಗೆ ಮಾತನಾಡಿ ಪ್ರಧಾನಿ ಹುದ್ದೆಯ ಗೌರವವನ್ನು ಕಳೆಯಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಕಪ್ಪು ಬಟ್ಟೆಗಳನ್ನು ಧರಿಸುವುದನ್ನು ಮಾಟ-ಮಂತ್ರ, ವಾಮಾಚಾರದಂತಹ ಕೃತ್ಯಗಳಿಗೆ ಹೋಲಿಸಿ ಮೋದಿ ಟೀಕೆ ಮಾಡಿದ್ದರು.</p>.<p>ಪ್ರಧಾನಿ ಮೋದಿ ಅವರಿಗೆ ರಾಷ್ಟ್ರದಲ್ಲಿನ ಬೆಲೆ ಏರಿಕೆ ಅಥವಾ ನಿರುದ್ಯೋಗ ಪರಿಸ್ಥಿತಿ ಕಾಣಿಸುತ್ತಿಲ್ಲವೇ? ಎಂದು ರಾಹುಲ್ ಪ್ರಶ್ನಿಸಿದ್ದಾರೆ.</p>.<p>ಪ್ರಧಾನಿಯಾದವರು ಪ್ರಜೆಗಳ ಸಮಸ್ಯೆಗಳ ಬಗ್ಗೆ ಮಾತನಾಡಬೇಕು ಎಂದು ರಾಷ್ಟ್ರ ಬಯಸುತ್ತದೆ. ಆದರೆ ಈ 'ಜುಮ್ಲಾಜೀವಿ' ಏನೇನೋ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ಪಿಎಂ ಮೋದಿ ವಿರುದ್ಧ ಹರಿಹಾಯ್ದಿದೆ.</p>.<p>'ಪ್ರಧಾನ ಮಂತ್ರಿ ಅವರೇ ನಿಮ್ಮ ಕರಾಳತನವನ್ನು ಮಚ್ಚಿಕೊಳ್ಳಲು ಮಾಟ-ಮಂತ್ರದಂತಹ ಮೂಢನಂಬಿಕೆಗಳ ಬಗ್ಗೆ ಮಾತನಾಡುತ್ತ ರಾಷ್ಟ್ರದ ಜನತೆಯ ದಾರಿ ತಪ್ಪಿಸುವುದನ್ನು ನಿಲ್ಲಿಸಿ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಪ್ರಧಾನಿ ಹುದ್ದೆಯ ಗೌರವ ಕಳೆಯುವುದನ್ನು ನಿಲ್ಲಿಸಿ' ಎಂದು ರಾಹುಲ್ ಆಗ್ರಹಿಸಿದ್ದಾರೆ.</p>.<p>ಪಾನಿಪತ್ನಲ್ಲಿ 900 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ, ಎರಡನೇ ಎಥೆನಾಲ್ ಉತ್ಪಾದನಾ ಘಟಕವನ್ನು ಉದ್ಘಾಟಿಸಿ ಮಾತನಾಡಿದ ನರೇಂದ್ರ ಮೋದಿ, 'ಆಗಸ್ಟ್ 5ರಂದು ಕೆಲವರು ಹೇಗೆ ಮಾಟ-ಮಂತ್ರಗಳನ್ನು ಹರಡಲು ಪ್ರಯತ್ನಿಸಿದರು ಎಂಬುದನ್ನು ನೋಡಿದ್ದೇವೆ. ಕಪ್ಪು ಬಟ್ಟೆ ಧರಿಸಿದರೆ ಅವರ ಕೆಟ್ಟ ದಿನಗಳು ಕೊನೆಯಾಗುತ್ತವೆ ಎಂದು ಭಾವಿಸಿಕೊಂಡಿದ್ದಾರೆ. ಆದರೆ, ಮಾಟ-ಮಂತ್ರ, ವಾಮಾಚಾರದಂತಹ ಕೃತ್ಯಗಳಿಗೆ, ಮೌಢ್ಯಗಳಿಗೆ ಮೊರೆ ಹೋಗುವುದರಿಂದ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ ಎಂಬುದು ಅವರಿಗೆ ಗೊತ್ತಿಲ್ಲ' ಎಂದಿದ್ದರು.</p>.<p>ಬೆಲೆ ಏರಿಕೆ ವಿರುದ್ಧ ಆಗಸ್ಟ್ 5ರಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಸಂಸದರು, ಶಾಸಕರು ಹಾಗೂ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದರು.</p>.<p><a href="https://www.prajavani.net/india-news/whether-taxpayers-money-be-spent-on-public-welfare-or-ones-friends-arvind-kejriwal-demands-962277.html" itemprop="url">ತೆರಿಗೆ ದುಡ್ಡು ಯಾವುದಕ್ಕೆ ಬಳಕೆಯಾಗಬೇಕು?: ಜನಾಭಿಮತಕ್ಕೆ ಕೇಜ್ರಿವಾಲ್ ಒತ್ತಾಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>