ಟಿವಿ ಚಾನೆಲ್ ಮತ್ತು ಇತರ ಮಾಧ್ಯಮಗಳು ಈಗಾಗಲೇ ಆರೋಪಿಗೆ ಶಿಕ್ಷೆ ವಿಧಿಸುವ ಕಾರ್ಯಗಳನ್ನು ಮಾಡುತ್ತಿವೆ. ಈ ರೀತಿಯ ಸದೃಶ ತನಿಖೆಗಳು ಸುಪ್ರೀಂ ಕೋರ್ಟ್ ಆದೇಶ ಮತ್ತು ಕಾನೂನಿನ ವಿಧಿಯ ಉಲ್ಲಂಘನೆಯಾಗಿದೆ. ಸುಶಾಂತ್ ಪ್ರಕರಣದ ಬಗ್ಗೆ ವರದಿಗಾರಿಕೆ, ಚರ್ಚೆ ಮತ್ತು ಯಾವುದೇ ರೀತಿಯ ವಿಚಾರಣೆಗಳನ್ನು ನಡೆಸುವುದನ್ನು ಮಾಧ್ಯಮಗಳು ಮುಂದೂಡಲಿ. ಇದು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪ್ರಕರಣದ ತನಿಖೆ ಮೇಲೆ ಪರಿಣಾಮ ಬೀರುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.