<p class="title"><strong>ನವದೆಹಲಿ:</strong> ಭಾರತದ ಸೇನಾ ಪಡೆಗಳಿಗೆ ಯೋಧರ ನೇಮಕಾತಿ ಕುರಿತಾದ ಕೇಂದ್ರ ಸರ್ಕಾರದ ‘ಅಗ್ನಿಪಥ’ ಯೋಜನೆ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.</p>.<p class="title">ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಸೇನಾ ನೇಮಕಾತಿಗೆ ಹೊಸ ಯೋಜನೆ ತರುವ ಮೂಲಕ ಯುವಕರ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್, ಈ ‘ತುಘಲಕ್’ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.</p>.<p class="title"><a href="https://www.prajavani.net/karnataka-news/agnipath-scheme-govt-attacking-against-youth-alleges-dk-shivakumar-949043.html" itemprop="url">‘ಅಗ್ನಿಪಥ’ದಿಂದ ಯುವಕರ ಮೇಲೆ ದಾಳಿ: ಡಿ.ಕೆ.ಶಿವಕುಮಾರ್ </a></p>.<p class="title">ಭಾನುವಾರ ದೇಶದ ಹಲವು ನಗರಗಳಲ್ಲಿ ‘ಅಗ್ನಿಪಥ್ ಕಿ ಬಾತ್: ಯುವಾನ್ ಸೆ ವಿಶ್ವಾಸಘಾತ್’ ಎಂಬ ಸುದ್ದಿಗೋಷ್ಠಿಗಳನ್ನು ನಡೆಸಿದ ಕಾಂಗ್ರೆಸ್ನ 20 ಹಿರಿಯ ನಾಯಕರು ಮತ್ತು ವಕ್ತಾರರು, ರಾಷ್ಟ್ರೀಯ ಭದ್ರತೆಗೆ ಅಪಾಯ ಮತ್ತು ಯುವಕರಲ್ಲಿ ಅಸಮಾಧಾನ ಹುಟ್ಟಿಸುವ ಈ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.</p>.<p class="bodytext">ಯಾವುದೇ ಚರ್ಚೆಯಿಲ್ಲದ ಯುವಕರ ವಿರೋಧಿ ಮತ್ತು ದೇಶ ವಿರೋಧಿಯಾದ ಈ ಯೋಜನೆ ವಿರುದ್ಧ ಪ್ರತಿಯೊಂದು ವಿಧಾನಸಭೆ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ.</p>.<p class="bodytext"><a href="https://www.prajavani.net/district/bengaluru-city/protest-in-all-assembly-sectors-against-agnipath-948973.html" itemprop="url">ಅಗ್ನಿಪಥ ವಿರೋಧಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ – ಡಿಕೆಶಿ </a></p>.<p>ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪಕ್ಷದ ವಕ್ತಾರ ಶಕ್ತಿಸಿನ್ಹ್ ಗೋಹಿಲ್, ‘ನೆರೆಯ ಚೀನಾ ನಮ್ಮ ಗಡಿಗಳನ್ನು ಪ್ರವೇಶಿಸಿದ್ದ ಸಂದರ್ಭದಲ್ಲಿ ಅಗ್ನಿಪಥ ಯೋಜನೆಯು ರಾಷ್ಟ್ರೀಯ ಭದ್ರತೆಯ ಜೊತೆಗಿನ ಆಟದಂತಾಗಿದೆ. ಕಾಂಗ್ರೆಸ್ ಯುವಕರ ಜೊತೆ ನಿಲ್ಲಲಿದ್ದು, ತುಘಲಕ್ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಭಾರತದ ಸೇನಾ ಪಡೆಗಳಿಗೆ ಯೋಧರ ನೇಮಕಾತಿ ಕುರಿತಾದ ಕೇಂದ್ರ ಸರ್ಕಾರದ ‘ಅಗ್ನಿಪಥ’ ಯೋಜನೆ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.</p>.<p class="title">ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಸೇನಾ ನೇಮಕಾತಿಗೆ ಹೊಸ ಯೋಜನೆ ತರುವ ಮೂಲಕ ಯುವಕರ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್, ಈ ‘ತುಘಲಕ್’ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.</p>.<p class="title"><a href="https://www.prajavani.net/karnataka-news/agnipath-scheme-govt-attacking-against-youth-alleges-dk-shivakumar-949043.html" itemprop="url">‘ಅಗ್ನಿಪಥ’ದಿಂದ ಯುವಕರ ಮೇಲೆ ದಾಳಿ: ಡಿ.ಕೆ.ಶಿವಕುಮಾರ್ </a></p>.<p class="title">ಭಾನುವಾರ ದೇಶದ ಹಲವು ನಗರಗಳಲ್ಲಿ ‘ಅಗ್ನಿಪಥ್ ಕಿ ಬಾತ್: ಯುವಾನ್ ಸೆ ವಿಶ್ವಾಸಘಾತ್’ ಎಂಬ ಸುದ್ದಿಗೋಷ್ಠಿಗಳನ್ನು ನಡೆಸಿದ ಕಾಂಗ್ರೆಸ್ನ 20 ಹಿರಿಯ ನಾಯಕರು ಮತ್ತು ವಕ್ತಾರರು, ರಾಷ್ಟ್ರೀಯ ಭದ್ರತೆಗೆ ಅಪಾಯ ಮತ್ತು ಯುವಕರಲ್ಲಿ ಅಸಮಾಧಾನ ಹುಟ್ಟಿಸುವ ಈ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.</p>.<p class="bodytext">ಯಾವುದೇ ಚರ್ಚೆಯಿಲ್ಲದ ಯುವಕರ ವಿರೋಧಿ ಮತ್ತು ದೇಶ ವಿರೋಧಿಯಾದ ಈ ಯೋಜನೆ ವಿರುದ್ಧ ಪ್ರತಿಯೊಂದು ವಿಧಾನಸಭೆ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ.</p>.<p class="bodytext"><a href="https://www.prajavani.net/district/bengaluru-city/protest-in-all-assembly-sectors-against-agnipath-948973.html" itemprop="url">ಅಗ್ನಿಪಥ ವಿರೋಧಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ – ಡಿಕೆಶಿ </a></p>.<p>ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪಕ್ಷದ ವಕ್ತಾರ ಶಕ್ತಿಸಿನ್ಹ್ ಗೋಹಿಲ್, ‘ನೆರೆಯ ಚೀನಾ ನಮ್ಮ ಗಡಿಗಳನ್ನು ಪ್ರವೇಶಿಸಿದ್ದ ಸಂದರ್ಭದಲ್ಲಿ ಅಗ್ನಿಪಥ ಯೋಜನೆಯು ರಾಷ್ಟ್ರೀಯ ಭದ್ರತೆಯ ಜೊತೆಗಿನ ಆಟದಂತಾಗಿದೆ. ಕಾಂಗ್ರೆಸ್ ಯುವಕರ ಜೊತೆ ನಿಲ್ಲಲಿದ್ದು, ತುಘಲಕ್ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>