<p><strong>ಮುಂಬೈ; '</strong>ಕೋವಿಡ್ ಮೂರನೇ ಅಲೆ ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ರಾಜಕೀಯ ಸಮಾವೇಶಗಳು ನಡೆಯದಂತೆ ನೋಡಿಕೊಳ್ಳಬೇಕು' ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ತಾಕೀತು ಮಾಡಿದೆ.</p>.<p>ಕೋವಿಡ್ ಮೂರನೇ ಅಲೆ ತಡೆಗಟ್ಟಲುಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು.</p>.<p>ಕೋವಿಡ್ ನಡುವೆಯೂ ಈ ತಿಂಗಳ ಮಧ್ಯಂತರ ಅವಧಿಯಲ್ಲಿ ಮುಂಬೈನಲ್ಲಿ ದೊಡ್ಡ ರಾಜಕೀಯ ಸಮಾವೇಶ ನಡೆಸಲು ಅವಕಾಶ ಕೊಟ್ಟಿದ್ದೇಕೆ? ಎಂದು ನ್ಯಾ, ದೀಪಾಂಕರ್ ದತ್ತಾ ಮತ್ತು ಜಿ.ಎಸ್ ಕುಲಕರ್ಣಿ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ಪ್ರಶ್ನಿಸಿತು.</p>.<p>ನವಿ ಮುಂಬೈನಲ್ಲಿ ನಿರ್ಮಾಣವಾಗುತ್ತಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಳಾ ಸಾಹೇಬ್ ಠಾಕ್ರೆ ಅವರ ಹೆಸರನ್ನಿಡಬೇಕು ಎಂದು ಇತ್ತೀಚಿಗೆಶಿವಸೇನಾ ನಾಯಕ ಬಿ.ಡಿ ಪಾಟೀಲ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶ ನಡೆದಿತ್ತು.</p>.<p>'ಇನ್ನೂ ವಿಮಾನ ನಿಲ್ದಾಣ ನಿರ್ಮಾಣವಾಗಿಲ್ಲ.ಅದಾಗಲೇ ಜನ ತಮಗೆ ಬೇಕಾದವರ ಹೆಸರು ಇಡಬೇಕು ಎಂದು ರಾಜಕೀಯ ಉದ್ದೇಶದಿಂದ ಬೀದಿಗಿಳಿಯುತ್ತಿರುವುದು ದುರದೃಷ್ಟಕರ. ಕೊನೆ ಪಕ್ಷ ಕೋವಿಡ್ ಹೋಗುವವರೆಗೂ ಕಾಯುವ ತಾಳ್ಮೆ ಇಲ್ಲವಾ? ಎಂದು ಪೀಠ ಪ್ರಶ್ನಿಸಿದೆ.</p>.<p>'ಕೋವಿಡ್ ಇರುವುದರಿಂದಯಾವುದೇ ಬೃಹತ್ ರಾಜಕೀಯ ಸಮಾವೇಶ ನಡೆಯಲು ಅವಕಾಶ ಕೊಡಕೂಡದು. ಒಂದು ವೇಳೆ ನಿಮಗೆ (ಸರ್ಕಾರ) ತಡೆಯಲು ಆಗದಿದ್ದರೆ ಹೇಗೆ ತಡೆಯಬೇಕು ಎಂಬುದು ನಮಗೆ ಗೊತ್ತು' ಎಂದು ಪೀಠ ಆಕ್ರೋಶ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ; '</strong>ಕೋವಿಡ್ ಮೂರನೇ ಅಲೆ ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ರಾಜಕೀಯ ಸಮಾವೇಶಗಳು ನಡೆಯದಂತೆ ನೋಡಿಕೊಳ್ಳಬೇಕು' ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ತಾಕೀತು ಮಾಡಿದೆ.</p>.<p>ಕೋವಿಡ್ ಮೂರನೇ ಅಲೆ ತಡೆಗಟ್ಟಲುಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು.</p>.<p>ಕೋವಿಡ್ ನಡುವೆಯೂ ಈ ತಿಂಗಳ ಮಧ್ಯಂತರ ಅವಧಿಯಲ್ಲಿ ಮುಂಬೈನಲ್ಲಿ ದೊಡ್ಡ ರಾಜಕೀಯ ಸಮಾವೇಶ ನಡೆಸಲು ಅವಕಾಶ ಕೊಟ್ಟಿದ್ದೇಕೆ? ಎಂದು ನ್ಯಾ, ದೀಪಾಂಕರ್ ದತ್ತಾ ಮತ್ತು ಜಿ.ಎಸ್ ಕುಲಕರ್ಣಿ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ಪ್ರಶ್ನಿಸಿತು.</p>.<p>ನವಿ ಮುಂಬೈನಲ್ಲಿ ನಿರ್ಮಾಣವಾಗುತ್ತಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಳಾ ಸಾಹೇಬ್ ಠಾಕ್ರೆ ಅವರ ಹೆಸರನ್ನಿಡಬೇಕು ಎಂದು ಇತ್ತೀಚಿಗೆಶಿವಸೇನಾ ನಾಯಕ ಬಿ.ಡಿ ಪಾಟೀಲ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶ ನಡೆದಿತ್ತು.</p>.<p>'ಇನ್ನೂ ವಿಮಾನ ನಿಲ್ದಾಣ ನಿರ್ಮಾಣವಾಗಿಲ್ಲ.ಅದಾಗಲೇ ಜನ ತಮಗೆ ಬೇಕಾದವರ ಹೆಸರು ಇಡಬೇಕು ಎಂದು ರಾಜಕೀಯ ಉದ್ದೇಶದಿಂದ ಬೀದಿಗಿಳಿಯುತ್ತಿರುವುದು ದುರದೃಷ್ಟಕರ. ಕೊನೆ ಪಕ್ಷ ಕೋವಿಡ್ ಹೋಗುವವರೆಗೂ ಕಾಯುವ ತಾಳ್ಮೆ ಇಲ್ಲವಾ? ಎಂದು ಪೀಠ ಪ್ರಶ್ನಿಸಿದೆ.</p>.<p>'ಕೋವಿಡ್ ಇರುವುದರಿಂದಯಾವುದೇ ಬೃಹತ್ ರಾಜಕೀಯ ಸಮಾವೇಶ ನಡೆಯಲು ಅವಕಾಶ ಕೊಡಕೂಡದು. ಒಂದು ವೇಳೆ ನಿಮಗೆ (ಸರ್ಕಾರ) ತಡೆಯಲು ಆಗದಿದ್ದರೆ ಹೇಗೆ ತಡೆಯಬೇಕು ಎಂಬುದು ನಮಗೆ ಗೊತ್ತು' ಎಂದು ಪೀಠ ಆಕ್ರೋಶ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>