ಭಾರತದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷ ವರ್ದನ್ ಶ್ರಿಂಗ್ಲಾ ಭಾನುವಾರ ಮಾತನಾಡಿ, 'ವಿದ್ಯಾರ್ಥಿಗಳು ಸೇರಿದಂತೆ ಉಕ್ರೇನ್ನಲ್ಲಿರುವ ನಾಗರಿಕರನ್ನು ಭಾರತಕ್ಕೆ ಕರೆತರಲು ಸಾಧ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಕೀವ್ ನಗರವೊಂದರಲ್ಲೇ ಸುಮಾರು 2 ಸಾವಿರ ಭಾರತೀಯರು ಇದ್ದು, ಕಳೆದ ಕೆಲವು ದಿನಗಳಿಂದ 2 ಸಾವಿರಕ್ಕೂ ಅಧಿಕ ಜನರನ್ನು ಕರೆತರಲಾಗಿದೆ' ಎಂದು ತಿಳಿಸಿದ್ದರು.