<p><strong>ಷಹಜಹಾನ್ಪುರ, ಉತ್ತರಪ್ರದೇಶ</strong>: ರಸ್ತೆ ಅಪಘಾತ ಹಾಗೂ ಬೆಳೆ ಹಾನಿಗೆ ಕಾರಣವಾಗಿರುವ ಬಿಡಾಡಿ ದನಗಳ ಸಮಸ್ಯೆಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಉತ್ತರಪ್ರದೇಶದ ಷಹಜಹಾನ್ಪುರ ಜಿಲ್ಲಾಡಳಿತವು ತನ್ನ ವ್ಯಾಪ್ತಿಯ ಪ್ರತಿ ಗ್ರಾಮ ಹಾಗೂ ಮನೆಗಳಲ್ಲಿರುವ ಜಾನುವಾರುಗಳ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳಲು ಗಣತಿಯನ್ನು ನಡೆಸುತ್ತಿದೆ.</p>.<p>‘ಈ ಗಣತಿಯು ಜಾನುವಾರುಗಳ ಸಂಖ್ಯೆಯ ಮಾಹಿತಿಯನ್ನಿರಿಸಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೇ, ಹಾಲು ನೀಡುವುದನ್ನು ನಿಲ್ಲಿಸಿದ ಜಾನುವಾರುಗಳನ್ನುಯಾರಾದರೂ ತಮ್ಮ ಮನೆಯಿಂದ ಹೊರಹಾಕಿದ್ದರೆ ಅದನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ. ಜಾನುವಾರುಗಳನ್ನು ಹೊರಹಾಕಿದವರಿಂದ ವಿವರಣೆ ಪಡೆಯಲಾಗುವುದು’ ಎಂದು ಮುಖ್ಯ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಬಹಾದ್ದೂರ್ ಸಿಂಗ್ ಹೇಳಿದರು.</p>.<p>‘ಷಹಜಹಾನ್ಪುರದಲ್ಲಿ 56 ಗೋಶಾಲೆಗಳಿವೆ. ಆದರೆ ಅನೇಕ ಮಂದಿ ಜಾನುವಾರುಗಳನ್ನು ಗೋಶಾಲೆಯಲ್ಲಿ ಬಿಡದೆ, ಬಿಡಾಡಿ ದನಗಳನ್ನಾಗಿ ಮಾಡುತ್ತಿದ್ದಾರೆ. ಗಣತಿ ಸಮೀಕ್ಷೆ ಇನ್ನೂ ಪ್ರಗತಿಯಲ್ಲಿದೆ. ಯಾವುದೇ ಹಸುವನ್ನು ಮನೆಯಿಂದ ಹೊರಹಾಕದಂತೆ ಜಿಲ್ಲೆಯ ಎಲ್ಲ ಗ್ರಾಮಸ್ಥರಿಗೆ ತಿಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಷಹಜಹಾನ್ಪುರ, ಉತ್ತರಪ್ರದೇಶ</strong>: ರಸ್ತೆ ಅಪಘಾತ ಹಾಗೂ ಬೆಳೆ ಹಾನಿಗೆ ಕಾರಣವಾಗಿರುವ ಬಿಡಾಡಿ ದನಗಳ ಸಮಸ್ಯೆಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಉತ್ತರಪ್ರದೇಶದ ಷಹಜಹಾನ್ಪುರ ಜಿಲ್ಲಾಡಳಿತವು ತನ್ನ ವ್ಯಾಪ್ತಿಯ ಪ್ರತಿ ಗ್ರಾಮ ಹಾಗೂ ಮನೆಗಳಲ್ಲಿರುವ ಜಾನುವಾರುಗಳ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳಲು ಗಣತಿಯನ್ನು ನಡೆಸುತ್ತಿದೆ.</p>.<p>‘ಈ ಗಣತಿಯು ಜಾನುವಾರುಗಳ ಸಂಖ್ಯೆಯ ಮಾಹಿತಿಯನ್ನಿರಿಸಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೇ, ಹಾಲು ನೀಡುವುದನ್ನು ನಿಲ್ಲಿಸಿದ ಜಾನುವಾರುಗಳನ್ನುಯಾರಾದರೂ ತಮ್ಮ ಮನೆಯಿಂದ ಹೊರಹಾಕಿದ್ದರೆ ಅದನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ. ಜಾನುವಾರುಗಳನ್ನು ಹೊರಹಾಕಿದವರಿಂದ ವಿವರಣೆ ಪಡೆಯಲಾಗುವುದು’ ಎಂದು ಮುಖ್ಯ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಬಹಾದ್ದೂರ್ ಸಿಂಗ್ ಹೇಳಿದರು.</p>.<p>‘ಷಹಜಹಾನ್ಪುರದಲ್ಲಿ 56 ಗೋಶಾಲೆಗಳಿವೆ. ಆದರೆ ಅನೇಕ ಮಂದಿ ಜಾನುವಾರುಗಳನ್ನು ಗೋಶಾಲೆಯಲ್ಲಿ ಬಿಡದೆ, ಬಿಡಾಡಿ ದನಗಳನ್ನಾಗಿ ಮಾಡುತ್ತಿದ್ದಾರೆ. ಗಣತಿ ಸಮೀಕ್ಷೆ ಇನ್ನೂ ಪ್ರಗತಿಯಲ್ಲಿದೆ. ಯಾವುದೇ ಹಸುವನ್ನು ಮನೆಯಿಂದ ಹೊರಹಾಕದಂತೆ ಜಿಲ್ಲೆಯ ಎಲ್ಲ ಗ್ರಾಮಸ್ಥರಿಗೆ ತಿಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>