ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ತ್ಯಾಜ್ಯ ಸುಟ್ಟ 30 ಮಂದಿ ರೈತರ ವಿರುದ್ಧ ಪ್ರಕರಣ ದಾಖಲು

ದಂಡ ಪಾವತಿಸದ ಎಂಟು ಮಂದಿ ಜೈಲಿಗೆ
Last Updated 7 ನವೆಂಬರ್ 2020, 11:27 IST
ಅಕ್ಷರ ಗಾತ್ರ

ಫತೇಪುರ್‌: ಎರಡು ದಿನಗಳಿಂದ ಕೃಷಿ ತ್ಯಾಜ್ಯ ಸುಡುತ್ತಿದ್ದ ಆರೋಪದ ಮೇಲೆ ಫತೇಪುರ್ ಜಿಲ್ಲೆಯ ವಿವಿಧ ಭಾಗಗಳಲ್ಲಿ 30 ರೈತರ ವಿರುದ್ಧ ಪ್ರಕರಣ ದಾಖಲಾಗಿದ್ದು, ದಂಡ ಪಾವತಿಸದ ಎಂಟು ರೈತರನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೈರಾಂಪುರ ಹಳ್ಳಿಯಲ್ಲಿ ಗುರುವಾರ ಕೃಷಿ ತ್ಯಾಜ್ಯ ಸುಡುತ್ತಿದ್ದ ಎಂಟು ರೈತರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ, ಅವರಿಂದ ದಂಡ ಪಾವತಿಸಲಾಯಿತು‘ ಎಂದು ಹುಸ್ಸೇನ್‌ಗಂಜ್‌ನ ಠಾಣಾಧಿಕಾರಿ ಸತ್ಯೇಂದ್ರ ಸಿಂಗ್ ಭಡೌರಿಯಾ ತಿಳಿಸಿದ್ದಾರೆ. ಕಂದಾಯ ಅಧಿಕಾರಿಗಳು ನೀಡಿದ ವರದಿ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ ಉತ್ತರ ಪ್ರದೇಶ ಮತ್ತು ಪಂಜಾಬ್‌ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಬೆಳೆಯುಳಿಕೆ ಸುಡುವುದನ್ನು ನಿಷೇಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT