<p class="title"><strong>ನವದೆಹಲಿ: </strong>ದೆಹಲಿ ವಿಶ್ವವಿದ್ಯಾಲಯದ ಹಂಸರಾಜ್ ಕಾಲೇಜಿನ ಕ್ಯಾಂಟೀನ್ ಮತ್ತು ಹಾಸ್ಟೆಲ್ನಲ್ಲಿ ಮಾಂಸಾಹಾರ ನಿಷೇಧ ಆದೇಶದ ವಿರುದ್ಧ ಕಾಲೇಜಿನ ಹೊರಗೆ ಪ್ರತಿಭಟಿಸುತ್ತಿದ್ದ 40 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವಿದ್ಯಾರ್ಥಿ ಸಂಘಗಳ ಪ್ರತಿನಿಧಿಗಳು ಆರೋಪಿಸಿದ್ದಾರೆ.</p>.<p>ಮಾಂಸಾಹಾರವನ್ನು ಕೈಬಿಟ್ಟ ನಿರ್ಧಾರದ ವಿರುದ್ಧ ಕಾಲೇಜಿನ ಹಾಸ್ಟೆಲ್ ಎದುರು ಪ್ರತಿಭಟಿಸಲು ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾದ (ಎಸ್ಎಫ್ಐ) ಹಂಸರಾಜ್ ಕಾಲೇಜು ಘಟಕ ಬುಧವಾರ ಕರೆ ನೀಡಿತ್ತು.</p>.<p>‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಆದಾಗ್ಯೂ ಆಡಳಿತ ಮಂಡಳಿಯು ಕಾಲೇಜು ಆವರಣದೊಳಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ’ ಎಂದು ಎಸ್ಎಫ್ಐ ಕಾರ್ಯಕರ್ತೆ ಸಮಾ ತಿಳಿಸಿದರು.</p>.<p>‘ಪ್ರತಿಭಟನಾ ಸ್ಥಳದಿಂದ ತೆರಳುವಂತೆ ಸೂಚಿಸಲಾಗಿತ್ತು. ಆದಾಗ್ಯೂ 30ರಿಂದ 35 ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದರು. 14ರಿಂದ 15 ವಿದ್ಯಾರ್ಥಿಗಳನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಲಾಯಿತು’ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸೀ ಅವರು ತಿಳಿಸಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಲೇಜು ಪ್ರಾಂಶುಪಾಲ ರಾಮ ಶರ್ಮಾ ಅವರು, ‘ಮಾಂಸಾಹಾರ ನಿಷೇಧ ಆದೇಶವನ್ನು ಹಿಂಪಡೆಯುವುದಿಲ್ಲ. ಇದು ಆರ್ಯ ಸಮಾಜದ ಕಾಲೇಜು. ಕಾಲೇಜಿನಲ್ಲಿರುವ ಶೇ 90ರಷ್ಟು ವಿದ್ಯಾರ್ಥಿಗಳು ಸಸ್ಯಾಹಾರಿಗಳು. ಅವರೂ ಈ ಹಿಂದೆ ಮಾಂಸಾಹಾರ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದರು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ದೆಹಲಿ ವಿಶ್ವವಿದ್ಯಾಲಯದ ಹಂಸರಾಜ್ ಕಾಲೇಜಿನ ಕ್ಯಾಂಟೀನ್ ಮತ್ತು ಹಾಸ್ಟೆಲ್ನಲ್ಲಿ ಮಾಂಸಾಹಾರ ನಿಷೇಧ ಆದೇಶದ ವಿರುದ್ಧ ಕಾಲೇಜಿನ ಹೊರಗೆ ಪ್ರತಿಭಟಿಸುತ್ತಿದ್ದ 40 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವಿದ್ಯಾರ್ಥಿ ಸಂಘಗಳ ಪ್ರತಿನಿಧಿಗಳು ಆರೋಪಿಸಿದ್ದಾರೆ.</p>.<p>ಮಾಂಸಾಹಾರವನ್ನು ಕೈಬಿಟ್ಟ ನಿರ್ಧಾರದ ವಿರುದ್ಧ ಕಾಲೇಜಿನ ಹಾಸ್ಟೆಲ್ ಎದುರು ಪ್ರತಿಭಟಿಸಲು ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾದ (ಎಸ್ಎಫ್ಐ) ಹಂಸರಾಜ್ ಕಾಲೇಜು ಘಟಕ ಬುಧವಾರ ಕರೆ ನೀಡಿತ್ತು.</p>.<p>‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಆದಾಗ್ಯೂ ಆಡಳಿತ ಮಂಡಳಿಯು ಕಾಲೇಜು ಆವರಣದೊಳಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ’ ಎಂದು ಎಸ್ಎಫ್ಐ ಕಾರ್ಯಕರ್ತೆ ಸಮಾ ತಿಳಿಸಿದರು.</p>.<p>‘ಪ್ರತಿಭಟನಾ ಸ್ಥಳದಿಂದ ತೆರಳುವಂತೆ ಸೂಚಿಸಲಾಗಿತ್ತು. ಆದಾಗ್ಯೂ 30ರಿಂದ 35 ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದರು. 14ರಿಂದ 15 ವಿದ್ಯಾರ್ಥಿಗಳನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಲಾಯಿತು’ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸೀ ಅವರು ತಿಳಿಸಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಲೇಜು ಪ್ರಾಂಶುಪಾಲ ರಾಮ ಶರ್ಮಾ ಅವರು, ‘ಮಾಂಸಾಹಾರ ನಿಷೇಧ ಆದೇಶವನ್ನು ಹಿಂಪಡೆಯುವುದಿಲ್ಲ. ಇದು ಆರ್ಯ ಸಮಾಜದ ಕಾಲೇಜು. ಕಾಲೇಜಿನಲ್ಲಿರುವ ಶೇ 90ರಷ್ಟು ವಿದ್ಯಾರ್ಥಿಗಳು ಸಸ್ಯಾಹಾರಿಗಳು. ಅವರೂ ಈ ಹಿಂದೆ ಮಾಂಸಾಹಾರ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದರು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>