2002ರಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನಡೆದಿದ್ದ ಗೋಧ್ರೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತಹ ಕೆಲವು ವಿಷಯಗಳ ತನಿಖೆಯ ವಿಷಯವಿದು ಎಂದು ಎರಡು ಕಂತಿನ ಸಾಕ್ಷ್ಯಚಿತ್ರದಲ್ಲಿ ಹೇಳಲಾಗಿದೆ. ಆದರೆ, ಇದನ್ನು ತಳ್ಳಿಹಾಕಿರುವ ವಿದೇಶಾಂಗ ಸಚಿವಾಲಯವು, ಇದೊಂದು ಅಪಪ್ರಚಾರದ ಉದ್ದೇಶ ಹೊಂದಿರುವ ಸಾಕ್ಷ್ಯಚಿತ್ರ ಮತ್ತು ವಸ್ತುನಿಷ್ಠವಲ್ಲದ ಹಾಗೂ ವಸಾಹತುಶಾಹಿ ಮನಸ್ಥಿತಿಯ ಪ್ರತಿಬಿಂಬವಾಗಿದೆ ಎಂದು ಹೇಳಿದೆ.