ನವದೆಹಲಿ: ಉಕ್ರೇನ್ನಿಂದ ನಿರ್ಗಮಿಸಲು ಭಾರತದ ವಿದ್ಯಾರ್ಥಿಗಳಿಗೆ ಅಲ್ಲಿನ ವಿಶ್ವವಿದ್ಯಾಲಯಗಳು ಆರಂಭದಲ್ಲಿ ಸ್ಪಂದಿಸಲಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದರು. ಈ ಕುರಿತು ಹೇಳಿಕೆ ನೀಡಿರುವ ಅವರು, ಉಕ್ರೇನ್ನಿಂದ ಸುಮಾರು 22,500 ಭಾರತೀಯರನ್ನು ಕರೆತರಲಾಗಿದೆ ಎಂದು ತಿಳಿಸಿದ್ದಾರೆ.