<p><strong>ಕೊಚ್ಚಿ:</strong> ಕೇರಳದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 99.47 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಂದರೆ ಕೆಲವೇ ಕೆಲವು ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ.</p>.<p>ಅಂತವರ ಮನೋಬಲವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೆರವು ನೀಡಲು ಮುಂದಾಗಿರುವ ಕೆಲವು ಉದ್ಯಮಿಗಳು, ಉಚಿತ ಬಿರಿಯಾನಿ ಹಾಗೂ ಹೋಟೆಲ್ ವಾಸದ ಕೊಡುಗೆಯನ್ನು ಮುಂದಿಟ್ಟಿದ್ದಾರೆ.</p>.<p>ತಮಿಳುನಾಡಿನ ಕೊಡೈಕೆನಾಲ್ನಲ್ಲಿ ಹೋಂ ಸ್ಟೇ ಹಾಗೂ ರೆಸಾರ್ಟ್ ನಡೆಸುತ್ತಿರುವ ಕಲ್ಲಿಕೋಟೆ ಮೂಲದ ಸುಧೀಶ್ ಎಂಬವರು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಚಿತ ವಾಸದ ಕೊಡುಗೆ ಮುಂದಿರಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/jammu-kashmir-bans-slaughter-of-cows-camels-on-eid-ul-azha-animals-central-govt-848629.html" itemprop="url">ಬಕ್ರೀದ್ ಹಿನ್ನೆಲೆ: ಜಮ್ಮು-ಕಾಶ್ಮೀರದಲ್ಲಿ ಗೋವು, ಒಂಟೆ ಹತ್ಯೆ ನಿಷೇಧ </a></p>.<p>ಕೊಚ್ಚಿ ಮೂಲದ ಇನ್ನೊಬ್ಬರು, ಫೇಲ್ ಆದ ವಿದ್ಯಾರ್ಥಿಗಳಿಗೆ ಉಚಿತ ಬಿರಿಯಾನಿ ಆಫರ್ ಮಾಡಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಸುಧೀಶ್, ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅನೇಕ ಮಕ್ಕಳು ಫೇಸ್ಬುಕ್ನಲ್ಲಿ ಪೋಸ್ಟ್ ಮೂಲಕ ಸಂಭ್ರಮಿಸುತ್ತಾರೆ. ಆದರೆ ಫೇಲ್ ಆದ ವಿದ್ಯಾರ್ಥಿಗಳ ಮನೋಸ್ಥಿತಿ ಹೇಗಿರಬಹುದು? ಇದುವೇ ನನಗೆ ಈ ರೀತಿಯಾಗಿ ಯೋಚಿಸಲು ಪ್ರೇರೇಪಿಸಿದೆ. ಆರ್ಥಿಕವಾಗಿ ದುರ್ಬಲವಾಗಿರುವ ವ್ಯಕ್ತಿಗಳಿಂದ ಅನೇಕ ಕರೆಗಳು ಬರುತ್ತಿವೆ ಎಂದಿದ್ದಾರೆ.</p>.<p>ಅನುತ್ತೀರ್ಣರಾದ ವಿದ್ಯಾರ್ಥಿಗಳು ಕಲಿಕಾ ತೊಂದರೆಗಳಿಂದ ಬಳಲುತ್ತಿದ್ದಾರೆ. ಫೇಲ್ ಆದ ಅನೇಕ ವಿದ್ಯಾರ್ಥಿಗಳ ಮನೆಗಳಲ್ಲಿನ ಪರಿಸ್ಥಿತಿ ಕಲಿಕೆಗೆ ಪೂರಕವಾಗಿಲ್ಲ ಎಂದು ಅಲಪ್ಪುಳ ಜಿಲ್ಲೆಯ ಶಿಕ್ಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.</p>.<p>ಕೇರಳದಲ್ಲಿ 4.19 ಲಕ್ಷ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ, 2,236 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು.</p>.<p>ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ವೈಫಲ್ಯತೆಗೆ ಕಾರಣಗಳನ್ನು ಕಂಡುಹಿಡಿಯಲು ಪ್ರಯತ್ನ ನಡೆಯುತ್ತಿದೆ. ಅದೇ ಹೊತ್ತಿಗೆ ಉನ್ನತ ವ್ಯಾಸಂಗಕ್ಕೆ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟದ ಬಗ್ಗೆಯೂ ಕಳವಳ ವ್ಯಕ್ತವಾಗಿದೆ.</p>.<p>ಕೋವಿಡ್ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಶ್ನೆಗಳು ಹಾಗೂ ಮೌಲ್ಯಮಾಪನದಲ್ಲಿ ಉದಾರ ನೀತಿಯನ್ನು ಅನುಸರಿಸಲಾಗಿತ್ತು. ಇದರಿಂದ ಮೊದಲ ಬಾರಿಗೆ ರಾಜ್ಯದಲ್ಲಿ ಗರಿಷ್ಠ ಮಟ್ಟದ ಫಲಿತಾಂಶ ದಾಖಲಾಗಲು ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಕೇರಳದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 99.47 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಂದರೆ ಕೆಲವೇ ಕೆಲವು ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ.</p>.<p>ಅಂತವರ ಮನೋಬಲವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೆರವು ನೀಡಲು ಮುಂದಾಗಿರುವ ಕೆಲವು ಉದ್ಯಮಿಗಳು, ಉಚಿತ ಬಿರಿಯಾನಿ ಹಾಗೂ ಹೋಟೆಲ್ ವಾಸದ ಕೊಡುಗೆಯನ್ನು ಮುಂದಿಟ್ಟಿದ್ದಾರೆ.</p>.<p>ತಮಿಳುನಾಡಿನ ಕೊಡೈಕೆನಾಲ್ನಲ್ಲಿ ಹೋಂ ಸ್ಟೇ ಹಾಗೂ ರೆಸಾರ್ಟ್ ನಡೆಸುತ್ತಿರುವ ಕಲ್ಲಿಕೋಟೆ ಮೂಲದ ಸುಧೀಶ್ ಎಂಬವರು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಚಿತ ವಾಸದ ಕೊಡುಗೆ ಮುಂದಿರಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/jammu-kashmir-bans-slaughter-of-cows-camels-on-eid-ul-azha-animals-central-govt-848629.html" itemprop="url">ಬಕ್ರೀದ್ ಹಿನ್ನೆಲೆ: ಜಮ್ಮು-ಕಾಶ್ಮೀರದಲ್ಲಿ ಗೋವು, ಒಂಟೆ ಹತ್ಯೆ ನಿಷೇಧ </a></p>.<p>ಕೊಚ್ಚಿ ಮೂಲದ ಇನ್ನೊಬ್ಬರು, ಫೇಲ್ ಆದ ವಿದ್ಯಾರ್ಥಿಗಳಿಗೆ ಉಚಿತ ಬಿರಿಯಾನಿ ಆಫರ್ ಮಾಡಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಸುಧೀಶ್, ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅನೇಕ ಮಕ್ಕಳು ಫೇಸ್ಬುಕ್ನಲ್ಲಿ ಪೋಸ್ಟ್ ಮೂಲಕ ಸಂಭ್ರಮಿಸುತ್ತಾರೆ. ಆದರೆ ಫೇಲ್ ಆದ ವಿದ್ಯಾರ್ಥಿಗಳ ಮನೋಸ್ಥಿತಿ ಹೇಗಿರಬಹುದು? ಇದುವೇ ನನಗೆ ಈ ರೀತಿಯಾಗಿ ಯೋಚಿಸಲು ಪ್ರೇರೇಪಿಸಿದೆ. ಆರ್ಥಿಕವಾಗಿ ದುರ್ಬಲವಾಗಿರುವ ವ್ಯಕ್ತಿಗಳಿಂದ ಅನೇಕ ಕರೆಗಳು ಬರುತ್ತಿವೆ ಎಂದಿದ್ದಾರೆ.</p>.<p>ಅನುತ್ತೀರ್ಣರಾದ ವಿದ್ಯಾರ್ಥಿಗಳು ಕಲಿಕಾ ತೊಂದರೆಗಳಿಂದ ಬಳಲುತ್ತಿದ್ದಾರೆ. ಫೇಲ್ ಆದ ಅನೇಕ ವಿದ್ಯಾರ್ಥಿಗಳ ಮನೆಗಳಲ್ಲಿನ ಪರಿಸ್ಥಿತಿ ಕಲಿಕೆಗೆ ಪೂರಕವಾಗಿಲ್ಲ ಎಂದು ಅಲಪ್ಪುಳ ಜಿಲ್ಲೆಯ ಶಿಕ್ಷಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.</p>.<p>ಕೇರಳದಲ್ಲಿ 4.19 ಲಕ್ಷ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ, 2,236 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು.</p>.<p>ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ವೈಫಲ್ಯತೆಗೆ ಕಾರಣಗಳನ್ನು ಕಂಡುಹಿಡಿಯಲು ಪ್ರಯತ್ನ ನಡೆಯುತ್ತಿದೆ. ಅದೇ ಹೊತ್ತಿಗೆ ಉನ್ನತ ವ್ಯಾಸಂಗಕ್ಕೆ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟದ ಬಗ್ಗೆಯೂ ಕಳವಳ ವ್ಯಕ್ತವಾಗಿದೆ.</p>.<p>ಕೋವಿಡ್ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಶ್ನೆಗಳು ಹಾಗೂ ಮೌಲ್ಯಮಾಪನದಲ್ಲಿ ಉದಾರ ನೀತಿಯನ್ನು ಅನುಸರಿಸಲಾಗಿತ್ತು. ಇದರಿಂದ ಮೊದಲ ಬಾರಿಗೆ ರಾಜ್ಯದಲ್ಲಿ ಗರಿಷ್ಠ ಮಟ್ಟದ ಫಲಿತಾಂಶ ದಾಖಲಾಗಲು ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>