‘ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯವನ್ನು ಸುಡುವುದು, ರಸ್ತೆಯಲ್ಲಿನ ದೂಳು, ಕಟ್ಟಡ ನಿರ್ಮಾಣ ಚಟುವಟಿಕೆ, ತ್ಯಾಜ್ಯ ಸುಡುವುದು, ಕೈಗಾರಿಕೆಗಳು ಮತ್ತು ವಾಹನಗಳ ಹೊಗೆಯಿಂದಾಗಿ ಚಳಿಗಾಲದಲ್ಲಿ ದೆಹಲಿಯ ವಾಯುಗುಣಮಟ್ಟ ಕುಸಿಯುತ್ತಿದೆ. ಈ ಸಮಸ್ಯೆಗಳಿಗೆ ಪ್ರತ್ಯೇಕ ಪರಿಹಾರ ಸೂಚಿಸಿ ಕಾರ್ಯಯೋಜನೆ ರೂಪಿಸಬೇಕು’ ಎಂದು ಸಚಿವರು ಸೂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.