ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೂಟು ನೆಕ್ಕುವ ರಾಜಕಾರಣ ನನ್ನದಲ್ಲ: ಬೊಮ್ಮಾಯಿಗೆ ಸುಬ್ರಮಣಿಯನ್‌ ಸ್ವಾಮಿ ತಿರುಗೇಟು

Last Updated 17 ಸೆಪ್ಟೆಂಬರ್ 2021, 8:08 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಅವರು ತಮ್ಮನ್ನು ಫ್ರೀಲ್ಯಾನ್ಸ್‌ ಪೊಲಿಟಿಷಿಯನ್‌ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

'ನಾನು 6 ಬಾರಿ ಸಂಸದನಾಗಿದ್ದು ಮತ್ತು ಎರಡು ಬಾರಿ ಸಂಪುಟ ದರ್ಜೆಯ ಸ್ಥಾನಮಾನ ಪಡೆದಿದ್ದು ಬೂಟು ನೆಕ್ಕುವ ಮೂಲಕ ಅಲ್ಲ, ಅತ್ಯವಶ್ಯಕ ಸತ್ಯಗಳನ್ನು ಪ್ರಜಾಪ್ರಭುತ್ವಕ್ಕೆ ತಿಳಿಸುವ ಮೂಲಕ' ಎಂದು ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

'ಬೊಮ್ಮಾಯಿ ಅವರಂತಹ ಸಣ್ಣವರಿಗೆ ಪ್ರತಿಕ್ರಿಯಿಸಲು ನೀವು ತುಂಬ ದೊಡ್ಡವರು' ಎಂಬ ಕಮೆಂಟ್‌ ಒಂದಕ್ಕೆ ಪ್ರತಿಕ್ರಿಯಿಸಿರುವ ಸ್ವಾಮಿ, ಬಹುಷಃ ಇರಬಹುದು. ಆದರೆ ಅವರ ತಂದೆ ನನಗೆ ಆತ್ಮೀಯ ಸ್ನೇಹಿತ. ಬೊಮ್ಮಾಯಿ ನನಗೆ ಚಿಕ್ಕ ಹುಡುಗನಾಗಿ ಗೊತ್ತು. ಹಾಗಾಗಿ ನಾನು ಅವನಿಗೆ ಈಗಲೂ ಬಯ್ಯಬಹುದು' ಎಂದಿದ್ದಾರೆ.

ವಿಧಾನಸಭೆಯಲ್ಲಿ ಬೆಲೆ ಏರಿಕೆ ಕುರಿತ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಕೆಲವು ತಿಂಗಳುಗಳ ಹಿಂದೆ ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಕುರಿತು ಸುಬ್ರಮಣಿಯನ್‌ ಸ್ವಾಮಿ ಮಾಡಿದ್ದ ಟ್ವೀಟ್‌ ಉಲ್ಲೇಖಿಸಿದಾಗ ಬಸವರಾಜ ಬೊಮ್ಮಾಯಿ ಅವರು ಸ್ವಾಮಿ ಅವರನ್ನು ಫ್ರೀಲ್ಯಾನ್ಸ್‌ ಪೊಲಿಟಿಷಿಯನ್‌ ಎಂದಿದ್ದರು. ಆರ್ಥಿಕ ತಜ್ಞರಾಗಿ ಜೀನಿಯಸ್‌ ಎಂದೂ ಶ್ಲಾಘಿಸಿದ್ದರು.

‘ಪೆಟ್ರೋಲ್‌ ಬೆಲೆ ರಾಮನ ಭಾರತದಲ್ಲಿ ₹93, ಸೀತೆಯ ನೇಪಾಳದಲ್ಲಿ ₹51, ರಾವಣನ ಶ್ರೀಲಂಕಾದಲ್ಲಿ ₹51’ ಎಂದು ಟ್ವೀಟ್‌ ಮಾಡಿದ್ದು ನಿಮ್ಮ ಪಕ್ಷದವರೇ ಆದ ಸುಬ್ರಮಣಿಯನ್‌ ಸ್ವಾಮಿ. ಇದಕ್ಕೆ ಏನು ಹೇಳುತ್ತೀರಿ’ ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯನ್ನು ಕುಟುಕಿದ್ದರು.

ಸಿಎಂ ಬೊಮ್ಮಾಯಿ ಹೇಳಿಕೆಗೆ ಸುಬ್ರಮಣಿಯನ್‌ ಸ್ವಾಮಿ ಪ್ರತಿಕ್ರಿಯೆ
ಸಿಎಂ ಬೊಮ್ಮಾಯಿ ಹೇಳಿಕೆಗೆ ಸುಬ್ರಮಣಿಯನ್‌ ಸ್ವಾಮಿ ಪ್ರತಿಕ್ರಿಯೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT