ಬೆಂಗಳೂರು: ತೆಲಂಗಾಣದ ಪಡಿತರ ವಿತರಣಾ ಕೇಂದ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಇಲ್ಲದಿರುವ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗರಂ ಆದ ಘಟನೆಯ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಇದೊಂದು ಚಮಚಾಗಿರಿಯ ಅತ್ಯಂತ ನಾಚಿಕೆಗೇಡಿನ ಪ್ರದರ್ಶನ ಎಂದಿದ್ದಾರೆ.
'ಪಡಿತರ ಕೇಂದ್ರಗಳಲ್ಲಿ ಪ್ರಧಾನಿ ಚಿತ್ರ ಇಲ್ಲದಿರುವ ಬಗ್ಗೆ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ (ಪಿಡಿಎಸ್)ಕ್ಕೆ ದೂರು ನೀಡಬಹುದಿತ್ತು' ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.
Nirmala Sitharaman fumes at absence of PM Modi’s picture at Telangana PDS shop https://t.co/jHPx6yLKVa: Most shameful display of chumchagiri. At most she could have written to the Minister in charge of PDS complaining about the non display of Modi photo.
ನಿರ್ಮಲಾ ಸೀತಾರಾಮನ್ ಅವರು ಕಾಮರೆಡ್ಡಿ ಜಿಲ್ಲೆಯಲ್ಲಿ ಪಡಿತರ ಕೇಂದ್ರಗಳಿಗೆ ಭೇಟಿ ನೀಡಿದ್ದ ಸಂದರ್ಭ ಅಲ್ಲಿ ಮೋದಿ ಚಿತ್ರ ಇಲ್ಲದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಪಡಿತರ ಕೇಂದ್ರಗಳಲ್ಲಿ ವಿತರಿಸುತ್ತಿರುವ ಅಕ್ಕಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಷ್ಟು ಹಣ ನೀಡುತ್ತಿವೆ ಎಂಬ ಬಗ್ಗೆ ವಿವರ ನೀಡುವಂತೆ ಕೇಳಿದ್ದರು.
ಇದಕ್ಕೆ ಪ್ರತಿಯಾಗಿ ಟಿಆರ್ಎಸ್ ಕಾರ್ಯಕರ್ತರು ಸಿಲಿಂಡರ್ಗಳ ಮೇಲೆ ಪ್ರಧಾನಿ ಮೋದಿ ಚಿತ್ರದ ಜೊತೆಗೆ ಬೆಲೆಯನ್ನು ನಮೂದಿಸಿರುವ ಪೋಸ್ಟರ್ ಅಂಟಿಸಿ ಟೀಕಿಸಿದ್ದಾರೆ.