<p>ಕೋಲ್ಕತ್ತ: ಕೋಲ್ಕತ್ತಾದ ಉಪನಗರ ರೈಲುಗಳ 90 ಚಾಲಕರು ಮತ್ತು ಗಾರ್ಡ್ಗಳಿಗೆ ‘ಕೋವಿಡ್‘ ದೃಢಪಟ್ಟ ಕಾರಣ ಸೀಲ್ಡಾ ವಿಭಾಗದಲ್ಲಿ 56 ಸ್ಥಳೀಯ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.</p>.<p>ಹೌರಾ ವಿಭಾಗದ ರೈಲುಗಳ ಸಂಚಾರ ರದ್ದುಗೊಳಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದುಮಂಗಳವಾರ ಪೂರ್ವ ರೈಲ್ವೆಯಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/covid-19-rajnath-asks-armed-forces-to-extend-help-to-civil-administrations-823933.html" itemprop="url">ಕೋವಿಡ್ ನಿರ್ವಹಣೆ: ರಾಜ್ಯಗಳಿಗೆ ನೆರವಾಗುವಂತೆ ಸೇನೆಗೆ ರಾಜನಾಥ್ ಸಿಂಗ್ ಸೂಚನೆ</a></p>.<p>‘ಪರಿಸ್ಥಿತಿ ತೀರಾ ಹದಗೆಟ್ಟಿದೆ. 90 ಚಾಲಕರು ಮತ್ತು ಗಾರ್ಡ್ಗಳಿಗೆ ಕೋವಿಡ್ ದೃಢಪಟ್ಟಿದ್ದು, ಕೆಲಸಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ 56 ಉಪನಗರ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಈ ನಿರ್ಧಾರದಿಂದ ಎಕ್ಸ್ಪ್ರೆಸ್ ಮತ್ತು ಮೇಲ್ ರೈಲುಗಳ ಸಂಚಾರಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ’ ಎಂದು ಪೂರ್ವ ರೈಲ್ವೆ ಇಲಾಖೆಯ ವಕ್ತಾರ ಏಕಲವ್ಯ ಚಕ್ರವರ್ತಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>‘ಬೇಡಿಕೆ ಕಡಿಮೆ ಇರುವ ಅವಧಿಯಲ್ಲಿ (ನಾನ್ ಪೀಕ್ ಹವರ್) ಸಂಚರಿಸುವ ರೈಲುಗಳನ್ನು ರದ್ದುಗೊಳಿಸಿದ್ದು, ಆ ಅವಧಿಯಲ್ಲಿ ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ‘ ಎಂದು ಚಕ್ರವರ್ತಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಕಳೆದ ವರ್ಷ ಲಾಕ್ಡೌನ್ನಿಂದಾಗಿ ಏಳು ತಿಂಗಳು ಸ್ಥಗಿತಗೊಂಡಿದ್ದ ಉಪನಗರ ರೈಲು ಸೇವೆಗಳು ನವೆಂಬರ್ 11ರಿಂದ ಪುನರಾರಂಭಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲ್ಕತ್ತ: ಕೋಲ್ಕತ್ತಾದ ಉಪನಗರ ರೈಲುಗಳ 90 ಚಾಲಕರು ಮತ್ತು ಗಾರ್ಡ್ಗಳಿಗೆ ‘ಕೋವಿಡ್‘ ದೃಢಪಟ್ಟ ಕಾರಣ ಸೀಲ್ಡಾ ವಿಭಾಗದಲ್ಲಿ 56 ಸ್ಥಳೀಯ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.</p>.<p>ಹೌರಾ ವಿಭಾಗದ ರೈಲುಗಳ ಸಂಚಾರ ರದ್ದುಗೊಳಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದುಮಂಗಳವಾರ ಪೂರ್ವ ರೈಲ್ವೆಯಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/covid-19-rajnath-asks-armed-forces-to-extend-help-to-civil-administrations-823933.html" itemprop="url">ಕೋವಿಡ್ ನಿರ್ವಹಣೆ: ರಾಜ್ಯಗಳಿಗೆ ನೆರವಾಗುವಂತೆ ಸೇನೆಗೆ ರಾಜನಾಥ್ ಸಿಂಗ್ ಸೂಚನೆ</a></p>.<p>‘ಪರಿಸ್ಥಿತಿ ತೀರಾ ಹದಗೆಟ್ಟಿದೆ. 90 ಚಾಲಕರು ಮತ್ತು ಗಾರ್ಡ್ಗಳಿಗೆ ಕೋವಿಡ್ ದೃಢಪಟ್ಟಿದ್ದು, ಕೆಲಸಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ 56 ಉಪನಗರ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಈ ನಿರ್ಧಾರದಿಂದ ಎಕ್ಸ್ಪ್ರೆಸ್ ಮತ್ತು ಮೇಲ್ ರೈಲುಗಳ ಸಂಚಾರಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ’ ಎಂದು ಪೂರ್ವ ರೈಲ್ವೆ ಇಲಾಖೆಯ ವಕ್ತಾರ ಏಕಲವ್ಯ ಚಕ್ರವರ್ತಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>‘ಬೇಡಿಕೆ ಕಡಿಮೆ ಇರುವ ಅವಧಿಯಲ್ಲಿ (ನಾನ್ ಪೀಕ್ ಹವರ್) ಸಂಚರಿಸುವ ರೈಲುಗಳನ್ನು ರದ್ದುಗೊಳಿಸಿದ್ದು, ಆ ಅವಧಿಯಲ್ಲಿ ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ‘ ಎಂದು ಚಕ್ರವರ್ತಿ ಅಭಿಪ್ರಾಯಪಟ್ಟಿದ್ದಾರೆ.</p>.<p>ಕಳೆದ ವರ್ಷ ಲಾಕ್ಡೌನ್ನಿಂದಾಗಿ ಏಳು ತಿಂಗಳು ಸ್ಥಗಿತಗೊಂಡಿದ್ದ ಉಪನಗರ ರೈಲು ಸೇವೆಗಳು ನವೆಂಬರ್ 11ರಿಂದ ಪುನರಾರಂಭಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>