ಕೊರೊನಾ ವೈರಸ್ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಈಗಾಗಲೇ 'ಯೆಲ್ಲೊ ಅಲರ್ಟ್' ಘೋಷಣೆ ಮಾಡಲಾಗಿದೆ. ಸಂಭಾವ್ಯ ಕೋವಿಡ್ ಅಲೆಯನ್ನು ತಡೆಗಟ್ಟಲು ಎಲ್ಲ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ತಿಳಿಸಿದ್ದಾರೆ.