ನವದೆಹಲಿ: ಸುಖ್ವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗುವ ಸಾಧ್ಯತೆಗಳಿವೆ. ಭಾನುವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಇದೇ ವಿಚಾರವಾಗಿ ಕಲಬುರ್ಗಿಯಲ್ಲಿ ಶನಿವಾರ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ 10 ಅಂಶಗಳನ್ನು ಮುಂದಿಟ್ಟು ನಾವು ಹಿಮಾಚಲ ಪ್ರದೇಶದಲ್ಲಿ ಬಹುಮತ ಗಳಿಸಿದ್ದೇವೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ’ ಎಂದು ಹೇಳಿದರು.
ಪಕ್ಷದ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಇದೇ ಮೊದಲ ಬಾರಿಗೆ ತವರಿಗೆ ಆಗಮಿಸಿದ್ದು, ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.
New Himachal Pradesh chief minister likely to take oath on Sunday: Congress sources