‘ದೆಹಲಿ ಪೊಲೀಸರು ನನ್ನ ಮೇಲೆ ಹೊರಿಸಿದ್ದ ಆರೋಪದಿಂದ ಮುಕ್ತಗೊಳಿಸಿ ಜಡ್ಜ್ ಗೀತಾಂಜಲಿ ಗೋಯೆಲ್ ಅವರು ನೀಡಿರುವ ಆದೇಶಕ್ಕಾಗಿ ಅವರಿಗೆ ವಿನಮ್ರವಾದ ಧನ್ಯವಾದ ತಿಳಿಸಲು ಬಯಸುತ್ತೇನೆ’ ಎಂದು ತರೂರ್ ಪ್ರಕಟಣೆಯೊಂದನ್ನು ಟ್ವೀಟ್ ಮಾಡಿದ್ದಾರೆ.
‘ಹತ್ತಾರು ಆಧಾರರಹಿತ ಆರೋಪಗಳನ್ನು ಮತ್ತು ಮಾಧ್ಯಮದ ನಿಂದನೆಯನ್ನು ತಾಳ್ಮೆಯಿಂದ ಎದುರಿಸಿದ್ದೇನೆ. ಭಾರತೀಯ ನ್ಯಾಯಾಂಗದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೆ. ಆ ನಂಬಿಕೆ ಇಂದು ಬಲವಾಗಿದೆ’ ಎಂದೂ ಪ್ರಕಟಣೆಯಲ್ಲಿ ಅವರು ಉಲ್ಲೇಖಿಸಿದ್ದಾರೆ.
ತಮ್ಮ ಪರ ವಾದ ಮಂಡಿಸಿದ ವಕೀಲರಿಗೂ ತರೂರ್ ಧನ್ಯವಾದ ಸಮರ್ಪಿಸಿದ್ದಾರೆ.
2014ರ ಜನವರಿ 17ರಂದು ದೆಹಲಿಯ ಐಷಾರಾಮಿ ಹೋಟೆಲ್ನಲ್ಲಿ ಸುನಂದಾ ಪುಷ್ಕರ್ ಅವರ ಶವ ಪತ್ತೆಯಾಗಿತ್ತು. ಶಶಿ ತರೂರ್ ಅವರ ಅಧಿಕೃತ ಬಂಗಲೆ ನವೀಕರಣ ನಡೆಯುತ್ತಿದ್ದರಿಂದ ದಂಪತಿ ಹೋಟೆಲ್ನಲ್ಲಿ ತಂಗಿದ್ದರು. ಇದಾದ ಬಳಿಕ ತರೂರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.