<p class="title"><strong>ಚಿತ್ತೂರು (ಆಂಧ್ರಪ್ರದೇಶ): </strong>ಮೂಢನಂಬಿಕೆಯಿಂದ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿದ್ದ ದಂಪತಿಯನ್ನು ಮಾನಸಿಕ ಆರೋಗ್ಯ ಚಿಕಿತ್ಸೆಗಾಗಿ ತಿರುಪತಿಗೆ ಕರೆದೊಯ್ಯಲಾಗಿದೆ.</p>.<p class="title">ಮಕ್ಕಳನ್ನು ಕೊಲೆ ಮಾಡಿದ್ದ ಆರೋಪದಡಿ ಬೋಧಕ ವೃತ್ತಿಯಲ್ಲಿದ್ದ ವಿ.ಪುರುಷೋತ್ತಮ ನಾಯ್ಡು ಮತ್ತು ಅವರ ಪತ್ನಿ ಪದ್ಮಜಾ ಅವರನ್ನು ಮದನಪಲ್ಲಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದು, ಸದ್ಯ ದಂಪತಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.</p>.<p class="title">ಮದನಪಲ್ಲಿ ಉಪ ಕಾರಾಗೃಹದ ಸೂಪರಿಂಟೆಂಡೆಂಟ್ ರಾಮಕೃಷ್ಣ ಯಾದವ್ ಅವರ ಪ್ರಕಾರ, ವೈದ್ಯರೊಬ್ಬರು ದಂಪತಿಯ ಆರೋಗ್ಯ ಪರಿಶೀಲಿಸಿದ್ದು, ಹೆಚ್ಚಿನ ತಪಾಸಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದರು ಎಂದು ಹೇಳಿದರು.</p>.<p class="title">ವೈದ್ಯರ ಸಲಹೆಯನ್ನು ಸ್ಥಳೀಯ ನ್ಯಾಯಾಲಯಕ್ಕೆ ತಿಳಿಸಿದ್ದೆವು. ಕಾರಾಗೃಹ ಆಡಳಿತ ಸೂಕ್ತ ತೀರ್ಮಾನ ಕೈಗೊಳ್ಳಬಹುದು ಎಂದು ಕೋರ್ಟ್ ಹೇಳಿತ್ತು. ಅದರಂತೆ, ಚಿಕಿತ್ಸೆಗಾಗಿ ದಂಪತಿಯನ್ನು ತಿರುಪತಿಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚಿತ್ತೂರು (ಆಂಧ್ರಪ್ರದೇಶ): </strong>ಮೂಢನಂಬಿಕೆಯಿಂದ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿದ್ದ ದಂಪತಿಯನ್ನು ಮಾನಸಿಕ ಆರೋಗ್ಯ ಚಿಕಿತ್ಸೆಗಾಗಿ ತಿರುಪತಿಗೆ ಕರೆದೊಯ್ಯಲಾಗಿದೆ.</p>.<p class="title">ಮಕ್ಕಳನ್ನು ಕೊಲೆ ಮಾಡಿದ್ದ ಆರೋಪದಡಿ ಬೋಧಕ ವೃತ್ತಿಯಲ್ಲಿದ್ದ ವಿ.ಪುರುಷೋತ್ತಮ ನಾಯ್ಡು ಮತ್ತು ಅವರ ಪತ್ನಿ ಪದ್ಮಜಾ ಅವರನ್ನು ಮದನಪಲ್ಲಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದು, ಸದ್ಯ ದಂಪತಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.</p>.<p class="title">ಮದನಪಲ್ಲಿ ಉಪ ಕಾರಾಗೃಹದ ಸೂಪರಿಂಟೆಂಡೆಂಟ್ ರಾಮಕೃಷ್ಣ ಯಾದವ್ ಅವರ ಪ್ರಕಾರ, ವೈದ್ಯರೊಬ್ಬರು ದಂಪತಿಯ ಆರೋಗ್ಯ ಪರಿಶೀಲಿಸಿದ್ದು, ಹೆಚ್ಚಿನ ತಪಾಸಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದರು ಎಂದು ಹೇಳಿದರು.</p>.<p class="title">ವೈದ್ಯರ ಸಲಹೆಯನ್ನು ಸ್ಥಳೀಯ ನ್ಯಾಯಾಲಯಕ್ಕೆ ತಿಳಿಸಿದ್ದೆವು. ಕಾರಾಗೃಹ ಆಡಳಿತ ಸೂಕ್ತ ತೀರ್ಮಾನ ಕೈಗೊಳ್ಳಬಹುದು ಎಂದು ಕೋರ್ಟ್ ಹೇಳಿತ್ತು. ಅದರಂತೆ, ಚಿಕಿತ್ಸೆಗಾಗಿ ದಂಪತಿಯನ್ನು ತಿರುಪತಿಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>