ಏಕನಾಥ ಶಿಂದೆ ಬಣವೇ ನಿಜವಾದ ಶಿವಸೇನಾ ಎಂದಿರುವ ಚುನಾವಣಾ ಆಯೋಗ, ಪಕ್ಷ ಮೂಲ ಗುರುತಾದ ಬಿಲ್ಲು ಮತ್ತು ಬಾಣವನ್ನು ಆ ಬಣಕ್ಕೆ ಫೆಬ್ರುವರಿ 17ರಂದು (ಶುಕ್ರವಾರ) ನಿಗದಿ ಮಾಡಿದೆ. ಅಷ್ಟಲ್ಲದೆ, ಪಕ್ಷದ ಮೇಲಿನ ಹಿಡಿತದ ಸಲುವಾಗಿ ಉಭಯ ಬಣಗಳು ನಡೆಸಿದ ಹೋರಾಟದ ಕುರಿತು 78 ಪುಟಗಳ ವರದಿ ಮಾಡಿದ್ದು, ಠಾಕ್ರೆ ಬಣಕ್ಕೆ ಈಗಾಗಲೇ ನೀಡಿರುವ 'ಉರಿಯುವ ಜ್ವಾಲೆ' ಗುರುತನ್ನು ರಾಜ್ಯದಲ್ಲಿನ ಉಪ ಚುನಾವಣೆಗಳು ಮುಗಿಯುವವರೆಗೂ ಬಳಸಲು ಅನುಮತಿ ನೀಡಿದೆ.