ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

84 ಮರ ಕಡಿಯಲು ಪ್ರಾಧಿಕಾರಕ್ಕೆ ಕೋರಲು ಎಂಎಂಆರ್‌ಸಿಎಲ್‌ಗೆ ‘ಸುಪ್ರೀಂ’ ಅನುಮತಿ

Last Updated 29 ನವೆಂಬರ್ 2022, 16:25 IST
ಅಕ್ಷರ ಗಾತ್ರ

ನವದೆಹಲಿ: ಮುಂಬೈನ ಆರೆ ಪ್ರದೇಶದಲ್ಲಿ ಕಾರ್‌ಶೆಡ್‌ ನಿರ್ಮಿಸಲು 84 ಮರಗಳನ್ನು ಕಡಿಯಲು ಅನುಮತಿ ಕೋರಿ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಲು ಮುಂಬೈ ಮೆಟ್ರೊ ರೈಲು ನಿಗಮಕ್ಕೆ( ಎಂಎಂಆರ್‌ಸಿಎಲ್‌) ಸುಪ್ರಿಂ ಕೋರ್ಟ್‌ ಮಂಗಳವಾರ ಅನುಮತಿ ನೀಡಿದೆ.

‘84 ಮರಗಳನ್ನು ಕಡಿಯಲು ಮರಗಳ ಪ್ರಾಧಿಕಾರದಿಂದ ಅನುಮತಿ ಪಡೆಯಲು ಎಂಎಂಆರ್‌ಸಿಎಲ್‌ ಅವಕಾಶ ನೀಡಲಾಗಿದೆ. ಸಂಬಂಧಿಸಿದ ಪ್ರಾಧಿಕಾರಗಳು ಈ ಕುರಿತು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲಿ’ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿ ಪಿ.ಎಸ್‌. ನರಸಿಂಹ ಅವರಿದ್ದ ಪೀಠವು ಹೇಳಿದೆ.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಎಂಎಂಆರ್‌ಸಿಎಲ್‌ ಪರವಾಗಿ ಕೋರ್ಟ್‌ನಲ್ಲಿ ಹಾಜರಿದ್ದರು.ಮುಂಬೈ ಮೆಟ್ರೊಗೆ ಸಂಬಂಧಿಸಿದ ಶೇ 95ರಷ್ಟು ಕೆಲಸ ಮುಗಿದಿದೆ ಎಂದು ಅವರು ಪೀಠಕ್ಕೆ ತಿಳಿಸಿದರು.

ಮರ ಕಡಿಯುವುದಕ್ಕೆ ಸಂಬಂಧಿಸಿದ ವಿವಾದದ ಕಾರಣ ಮುಂಬೈ ಮೆಟ್ರೊ ನಿರ್ಮಾಣವು ಕೆಲವು ದಿನಗಳಿಂದ ಸ್ಥಗಿತಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT