ರಾವ್ ಪರ ವಾದ ಮಂಡಿಸಿದ ಹಿರಿಯ ವಕೀಲ ಆನಂದ್ ಗ್ರೋವರ್, ರಾವ್ ಅವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಗೆ ವೈದ್ಯರು ಶಿಫಾರಸು ಮಾಡಿದ್ದಾರೆ. ರಾವ್ ತೆಲಂಗಾಣದ ಹೈದರಾಬಾದ್ ನಿವಾಸಿಯಾದ ಕಾರಣ ಅಲ್ಲಿಯೇ ಶಸ್ತ್ರಚಿಕಿತ್ಸೆಗೆ ಒಳಗಾಗಲು ಬಯಸಿದ್ದಾರೆ ಎಂದು ತಿಳಿಸಿದರು.ಹೆಚ್ಚುವರಿ ಸಾಲಿಟರಿ ಜನರಲ್ ಎಸ್.ವಿ.ರಾಜು ಅವರು ಈ ಮನವಿಗೆ ವಿರೋಧ ವ್ಯಕ್ತಪಡಿಸಿದರು.