‘ಸುಳ್ಳು ಸುದ್ದಿಗಳನ್ನು ನಿಯಂತ್ರಿಸಲು ಯಾವುದೇವ್ಯವಸ್ಥೆ ಇಲ್ಲದೇ ಇದ್ದರೆ, ಒಂದು ವ್ಯವಸ್ಥೆಯನ್ನು ರೂಪಿಸಿ. ಸುಳ್ಳು ಸುದ್ದಿಗೆ ತಡೆ ಒಡ್ಡುವ ಅಧಿಕಾರ ಸರ್ಕಾರಕ್ಕೆ ಇರುವಾಗ, ಎನ್ಬಿಎಸ್ಎಯಂತಹ ಹೊರಗಿನ ಸಂಸ್ಥೆಗೆ ಏಕೆ ನಿಯಂತ್ರಣದ ಜವಾಬ್ದಾರಿ ವಹಿಸಬೇಕು’ ಎಂದು ಪೀಠವು ಪ್ರಶ್ನಿಸಿತು.‘ಈ ಕಾಯ್ದೆ ಅಡಿ ಈಗಾಗಲೇ ಕ್ರಮ ತೆಗೆದುಕೊಂಡಿದ್ದೇವೆ’ ಎಂದು ಮೆಹ್ತಾ ಉತ್ತರಿಸಿದರು.