<p class="title"><strong>ನವದೆಹಲಿ: </strong>ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟುಗೂಡಿಸಿ ಜನವರಿ 27ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.</p>.<p class="title">ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್ಜಿಟಿ) ದಕ್ಷಿಣ ಪೀಠದ ಆದೇಶವನ್ನು ವಜಾ ಮಾಡಿದ್ದ ಎನ್ಜಿಟಿ ಪ್ರಧಾನ ಪೀಠದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರೀ ಕೋರ್ಟ್ ಇತರೆ ಅರ್ಜಿಗಳ ಜೊತೆಗೆ ಪರಿಣಿಸಲಿದೆ.</p>.<p class="title">ಕಾವೇರಿಗೆ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕಾಮಗಾರಿಯನ್ನು ಕರ್ನಾಟಕ ಸರ್ಕಾರ ಆರಂಭಿಸಿದೆಯೇ ಎಂಬ ಬಗ್ಗೆ ಸ್ಥಳ ಪರಿಶೀಲನೆಗಾಗಿ ಜಂಟಿ ಸಮಿತಿ ರಚಿಸಲು ಎನ್ಜಿಟಿಯ ದಕ್ಷಿಣ ಪೀಠ ಆದೇಶಿಸಿತ್ತು. ಪ್ರಧಾನ ಪೀಠವು ನಂತರ ವಜಾ ಮಾಡಿತ್ತು.</p>.<p class="title">ಪ್ರಧಾನಪೀಠದ ಆದೇಶದ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಯು ವಿಚಾರಣೆಗೆ ಬಂದಾಗ ನ್ಯಾಯಮೂರ್ತಿ ಡಿ.ಚಂದ್ರಚೂಡ್ ನೇತೃತ್ವದ ಪೀಠವು, ವಿವಾದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟಾಗಿಸಿ 27ರಂದು ವಿಚಾರಣೆ ನಡೆಸುವ ತೀರ್ಮಾನವನ್ನು ಪ್ರಕಟಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟುಗೂಡಿಸಿ ಜನವರಿ 27ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.</p>.<p class="title">ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್ಜಿಟಿ) ದಕ್ಷಿಣ ಪೀಠದ ಆದೇಶವನ್ನು ವಜಾ ಮಾಡಿದ್ದ ಎನ್ಜಿಟಿ ಪ್ರಧಾನ ಪೀಠದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರೀ ಕೋರ್ಟ್ ಇತರೆ ಅರ್ಜಿಗಳ ಜೊತೆಗೆ ಪರಿಣಿಸಲಿದೆ.</p>.<p class="title">ಕಾವೇರಿಗೆ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕಾಮಗಾರಿಯನ್ನು ಕರ್ನಾಟಕ ಸರ್ಕಾರ ಆರಂಭಿಸಿದೆಯೇ ಎಂಬ ಬಗ್ಗೆ ಸ್ಥಳ ಪರಿಶೀಲನೆಗಾಗಿ ಜಂಟಿ ಸಮಿತಿ ರಚಿಸಲು ಎನ್ಜಿಟಿಯ ದಕ್ಷಿಣ ಪೀಠ ಆದೇಶಿಸಿತ್ತು. ಪ್ರಧಾನ ಪೀಠವು ನಂತರ ವಜಾ ಮಾಡಿತ್ತು.</p>.<p class="title">ಪ್ರಧಾನಪೀಠದ ಆದೇಶದ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಯು ವಿಚಾರಣೆಗೆ ಬಂದಾಗ ನ್ಯಾಯಮೂರ್ತಿ ಡಿ.ಚಂದ್ರಚೂಡ್ ನೇತೃತ್ವದ ಪೀಠವು, ವಿವಾದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟಾಗಿಸಿ 27ರಂದು ವಿಚಾರಣೆ ನಡೆಸುವ ತೀರ್ಮಾನವನ್ನು ಪ್ರಕಟಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>