ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು: ಎಲ್ಲ ಅರ್ಜಿಗಳ ಒಟ್ಟುಗೂಡಿಸಿ 27ರಂದು ವಿಚಾರಣೆಗೆ ‘ಸುಪ್ರೀಂ’ ನಿರ್ಧಾರ

Last Updated 4 ಜನವರಿ 2022, 11:31 IST
ಅಕ್ಷರ ಗಾತ್ರ

ನವದೆಹಲಿ: ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟುಗೂಡಿಸಿ ಜನವರಿ 27ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ದಕ್ಷಿಣ ಪೀಠದ ಆದೇಶವನ್ನು ವಜಾ ಮಾಡಿದ್ದ ಎನ್‌ಜಿಟಿ ಪ್ರಧಾನ ಪೀಠದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರೀ ಕೋರ್ಟ್ ಇತರೆ ಅರ್ಜಿಗಳ ಜೊತೆಗೆ ಪರಿಣಿಸಲಿದೆ.

ಕಾವೇರಿಗೆ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕಾಮಗಾರಿಯನ್ನು ಕರ್ನಾಟಕ ಸರ್ಕಾರ ಆರಂಭಿಸಿದೆಯೇ ಎಂಬ ಬಗ್ಗೆ ಸ್ಥಳ ಪರಿಶೀಲನೆಗಾಗಿ ಜಂಟಿ ಸಮಿತಿ ರಚಿಸಲು ಎನ್‌ಜಿಟಿಯ ದಕ್ಷಿಣ ಪೀಠ ಆದೇಶಿಸಿತ್ತು. ಪ್ರಧಾನ ಪೀಠವು ನಂತರ ವಜಾ ಮಾಡಿತ್ತು.

ಪ್ರಧಾನಪೀಠದ ಆದೇಶದ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಯು ವಿಚಾರಣೆಗೆ ಬಂದಾಗ ನ್ಯಾಯಮೂರ್ತಿ ಡಿ.ಚಂದ್ರಚೂಡ್‌ ನೇತೃತ್ವದ ಪೀಠವು, ವಿವಾದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟಾಗಿಸಿ 27ರಂದು ವಿಚಾರಣೆ ನಡೆಸುವ ತೀರ್ಮಾನವನ್ನು ಪ್ರಕಟಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT