ಲವ್ ಜಿಹಾದ್ ತಡೆ ಕಾನೂನು: ವಿಚಾರಣೆಗೆ ‘ಸುಪ್ರೀಂ’ ನಕಾರ

ನವದೆಹಲಿ: ‘ಲವ್ ಜಿಹಾದ್’ ಕಾನೂನಿಗೆ ಸಂಬಂಧಪಟ್ಟಂತೆ ಹೊಸ ಅರ್ಜಿಗಳ ವಿಚಾರಣೆ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ‘ಲವ್ ಜಿಹಾದ್’ ಎಂದು ಆರೋಪಿಸಲಾದ ಪ್ರಕರಣಗಳ ಪರಿಶೀಲನೆ ಕೋರಿ ಸಲ್ಲಿಕೆಯಾದ ಸಾರ್ವಜನಿಕರ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸ್ವಯಂ ಸೇವಾ ಸಂಸ್ಥೆ ಈ ಅರ್ಜಿ ಸಲ್ಲಿಸಿತ್ತು.
ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ಬಾಲಸುಬ್ರಹ್ಮಣಿಯನ್ ಅವರಿದ್ದ ಪೀಠವು, ಪ್ರಕರಣ ಸಂಬಂಧ, ಹೈಕೋರ್ಟ್ ಮೊರೆ ಹೋಗುವಂತೆ ತಿಳಿಸಿದೆ.
ಈ ಕಾನೂನು ಸಾರ್ವಜನಿಕರ ಮೂಲಭೂತ ಹಕ್ಕು ಮೊಟಕುಗೊಳಿಸುತ್ತದೆ. ಇದು ಸಮಾಜ ವಿರೋಧಿಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.