‘ನ್ಯಾಯಾಲಯದ ವರದಿಯ ಪ್ರಕಾರ ಸೆಪ್ಟೆಂಬರ್ 20, 2021ಕ್ಕೂ ಮೊದಲು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. ಕೇಂದ್ರ ಸರ್ಕಾರದ ಪರವಾಗಿ ಯಾರೂ ಹಾಜರಾಗಿಲ್ಲ. ಈ ವಿಷಯವನ್ನು ಅ.22 ರಂದು ವಿಚಾರಣೆ ನಡೆಸುವ ವಿಷಯಗಳ ಪಟ್ಟಿಗೆ ಸೇರಿಸಿ,ಅಲ್ಲಿಯವರೆಗೆ ಪ್ರತಿವಾದಿಗಳು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ‘ ಎಂದು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನೂ ಒಳಗೊಂಡಿರುವ ಪೀಠ ಹೇಳಿದೆ.