<p><strong>ನವದೆಹಲಿ</strong>: ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಖಾಸಗಿ ಆಸ್ಪತ್ರೆಗಳಲ್ಲಿ ಪ್ರವೇಶ ಮತ್ತು ಚಿಕಿತ್ಸೆ ನೀಡುವಲ್ಲಿ ಹಿರಿಯ ನಾಗರಿಕರಿಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್. ಎಸ್. ರೆಡ್ಡಿ ಅವರನ್ನೊಳಗೊಂಡ ನ್ಯಾಯಪೀಠ ಕಳೆದ ವರ್ಷದ ಆಗಸ್ಟ್ 4ರಂದು, ‘ಕೊರೊನಾ ಸೋಂಕಿಗೆ ಒಳಗಾಗುವ ಅಪಾಯ ಇರುವ ಹಿರಿಯ ನಾಗರಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರವೇಶ ಮತ್ತು ಚಿಕಿತ್ಸೆಗೆ ಅವಕಾಶ ನೀಡಬೇಕೆಂದು‘ ನಿರ್ದೇಶನ ನೀಡಿತ್ತು. ಈಗ ಆ ಆದೇಶವನ್ನು ಪರಿಷ್ಕರಿಸಿ, ಸರ್ಕಾರಿ ಆಸ್ಪತ್ರೆಗಳ ಜತೆಗೆ, ಖಾಸಗಿ ಆಸ್ಪತ್ರೆಗಳಲ್ಲೂ ಹಿರಿಯ ನಾಗರಿಕರಿಗೆ ಚಿಕಿತ್ಸೆ ಆದ್ಯತೆ ನೀಡಬೇಕೆಂದು ಆದೇಶಿಸಿದೆ.</p>.<p>ಹಿರಿಯ ವಕೀಲ ಅಶ್ವನಿ ಕುಮಾರ್ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ಆ ಅರ್ಜಿಯಲ್ಲಿ ‘ಒಡಿಶಾ ಮತ್ತು ಪಂಜಾಬ್ ಹೊರತುಪಡಿಸಿ ಬೇರೆ ಯಾವ ರಾಜ್ಯಗಳೂ, ಈ ಹಿಂದೆ ಕೋರ್ಟ್ ನೀಡಿದ ನಿರ್ದೇಶನಕ್ಕೆ ಅನುಗುಣವಾಗಿ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಿಲ್ಲ‘ ಎಂದು ಉಲ್ಲೇಖಿಸಿದರು.</p>.<p>ಹಿರಿಯ ನಾಗರಿಕರಿಗೆ ನೆಮ್ಮದಿ ನೀಡುವಂತಹ ಅಶ್ವಿನ್ ಕುಮಾರ್ ನೀಡಿದ ಹೊಸ ಸಲಹೆಗಳಿಗೆ ಸ್ಪಂದಿಸಲು ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಮೂರು ವಾರಗಳ ಕಾಲಾವಕಾಶ ನೀಡಿತು.</p>.<p>ವಿಚಾರಣೆ ವೇಳೆ, ಕುಮಾರ್ ಅವರು, ‘ನ್ಯಾಯಾಲಯದ ನಿರ್ದೇಶನಗಳಿಗೆ ಅನುಸಾರವಾಗಿ ಎಲ್ಲ ರಾಜ್ಯಗಳು ಹೊಸದಾದ ನಿಗದಿತ ಕಾರ್ಯವಿಧಾನ (ಎಸ್ಒಪಿ) ಜಾರಿಗೊಳಿಸುವ ಅವಶ್ಯಕತೆ ಇದೆ‘ ಎಂದು ಹೇಳಿದರು. ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳ ಆರೋಗ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ನ್ಯಾಯಾಲಯ ನಿರ್ದೇಶನಗಳನ್ನು ನೀಡಬಹುದು ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಖಾಸಗಿ ಆಸ್ಪತ್ರೆಗಳಲ್ಲಿ ಪ್ರವೇಶ ಮತ್ತು ಚಿಕಿತ್ಸೆ ನೀಡುವಲ್ಲಿ ಹಿರಿಯ ನಾಗರಿಕರಿಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್. ಎಸ್. ರೆಡ್ಡಿ ಅವರನ್ನೊಳಗೊಂಡ ನ್ಯಾಯಪೀಠ ಕಳೆದ ವರ್ಷದ ಆಗಸ್ಟ್ 4ರಂದು, ‘ಕೊರೊನಾ ಸೋಂಕಿಗೆ ಒಳಗಾಗುವ ಅಪಾಯ ಇರುವ ಹಿರಿಯ ನಾಗರಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರವೇಶ ಮತ್ತು ಚಿಕಿತ್ಸೆಗೆ ಅವಕಾಶ ನೀಡಬೇಕೆಂದು‘ ನಿರ್ದೇಶನ ನೀಡಿತ್ತು. ಈಗ ಆ ಆದೇಶವನ್ನು ಪರಿಷ್ಕರಿಸಿ, ಸರ್ಕಾರಿ ಆಸ್ಪತ್ರೆಗಳ ಜತೆಗೆ, ಖಾಸಗಿ ಆಸ್ಪತ್ರೆಗಳಲ್ಲೂ ಹಿರಿಯ ನಾಗರಿಕರಿಗೆ ಚಿಕಿತ್ಸೆ ಆದ್ಯತೆ ನೀಡಬೇಕೆಂದು ಆದೇಶಿಸಿದೆ.</p>.<p>ಹಿರಿಯ ವಕೀಲ ಅಶ್ವನಿ ಕುಮಾರ್ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ಆ ಅರ್ಜಿಯಲ್ಲಿ ‘ಒಡಿಶಾ ಮತ್ತು ಪಂಜಾಬ್ ಹೊರತುಪಡಿಸಿ ಬೇರೆ ಯಾವ ರಾಜ್ಯಗಳೂ, ಈ ಹಿಂದೆ ಕೋರ್ಟ್ ನೀಡಿದ ನಿರ್ದೇಶನಕ್ಕೆ ಅನುಗುಣವಾಗಿ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಿಲ್ಲ‘ ಎಂದು ಉಲ್ಲೇಖಿಸಿದರು.</p>.<p>ಹಿರಿಯ ನಾಗರಿಕರಿಗೆ ನೆಮ್ಮದಿ ನೀಡುವಂತಹ ಅಶ್ವಿನ್ ಕುಮಾರ್ ನೀಡಿದ ಹೊಸ ಸಲಹೆಗಳಿಗೆ ಸ್ಪಂದಿಸಲು ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಮೂರು ವಾರಗಳ ಕಾಲಾವಕಾಶ ನೀಡಿತು.</p>.<p>ವಿಚಾರಣೆ ವೇಳೆ, ಕುಮಾರ್ ಅವರು, ‘ನ್ಯಾಯಾಲಯದ ನಿರ್ದೇಶನಗಳಿಗೆ ಅನುಸಾರವಾಗಿ ಎಲ್ಲ ರಾಜ್ಯಗಳು ಹೊಸದಾದ ನಿಗದಿತ ಕಾರ್ಯವಿಧಾನ (ಎಸ್ಒಪಿ) ಜಾರಿಗೊಳಿಸುವ ಅವಶ್ಯಕತೆ ಇದೆ‘ ಎಂದು ಹೇಳಿದರು. ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳ ಆರೋಗ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ನ್ಯಾಯಾಲಯ ನಿರ್ದೇಶನಗಳನ್ನು ನೀಡಬಹುದು ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>