<p><strong>ನವದೆಹಲಿ: </strong>ವಿಧಾನ ಪರಿಷತ್ ಸದಸ್ಯ (ಎಂಎಲ್ಸಿ) ಎ.ಎಚ್.ವಿಶ್ವನಾಥ್ ಅವರು ಸಚಿವರಾಗುವುದು ಅಸಾಂವಿಧಾನಿಕ ಎಂದು ಕರ್ನಾಟಕ ಹೈ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ಗುರುವಾರ ವಜಾಗೊಂಡಿದೆ.</p>.<p>ಸಚಿವ ಸ್ಥಾನಕ್ಕೆ ಸೇರ್ಪಡೆಯಾಗಲು ಅರ್ಹರಲ್ಲ ಎಂದು ಕರ್ನಾಟಕ ಹೈ ಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಬಿಜೆಪಿಯ ಎ.ಎಚ್. ವಿಶ್ವನಾಥ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.</p>.<p>‘ವಿಶ್ವನಾಥ್ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿರುವ ಕಾರಣ ಸಂವಿಧಾನದ 164(1–ಬಿ) ಮತ್ತು 361–ಬಿ ಪ್ರಕಾರ ಅನರ್ಹತೆ ಮುಂದುವರಿದಿದೆ. ಕರ್ನಾಟಕ ವಿಧಾನಸಭೆಯ ಅವಧಿ ಮುಗಿಯುವ ತನಕ ಅದು ಇರಲಿದೆ. ಅಷ್ಟರಲ್ಲಿ ಅವರು ಶಾಸಕರಾಗಿ ಚುನಾಯಿತರಾದರೆ ಈ ಅನರ್ಹತೆ ಮುಂದುವರಿಯುವುದಿಲ್ಲ’ ಎಂದು ಹೈಕೋರ್ಟ್ ಹೇಳಿತ್ತು.</p>.<p>ವಿಶ್ವನಾಥ್ ಅವರು ಜೆಡಿಎಸ್ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ವಿಧಾನಸಭೆ ಸ್ಪೀಕರ್ ಆಗಿದ್ದ ಕೆ.ಆರ್. ರಮೇಶ್ಕುಮಾರ್ ಅವರು ಅನರ್ಹಗೊಳಿಸಿದ 17 ಶಾಸಕರಲ್ಲಿ ವಿಶ್ವನಾಥ್ ಕೂಡ ಒಬ್ಬರು. 2019ರ ಡಿಸೆಂಬರ್ನಲ್ಲಿ ನಡೆದ ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ವಿಶ್ವನಾಥ್ ಸೋಲನುಭವಿಸಿದ್ದರು. ಕಳೆದ ವರ್ಷ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ವಿಧಾನ ಪರಿಷತ್ ಸದಸ್ಯ (ಎಂಎಲ್ಸಿ) ಎ.ಎಚ್.ವಿಶ್ವನಾಥ್ ಅವರು ಸಚಿವರಾಗುವುದು ಅಸಾಂವಿಧಾನಿಕ ಎಂದು ಕರ್ನಾಟಕ ಹೈ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ಗುರುವಾರ ವಜಾಗೊಂಡಿದೆ.</p>.<p>ಸಚಿವ ಸ್ಥಾನಕ್ಕೆ ಸೇರ್ಪಡೆಯಾಗಲು ಅರ್ಹರಲ್ಲ ಎಂದು ಕರ್ನಾಟಕ ಹೈ ಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಬಿಜೆಪಿಯ ಎ.ಎಚ್. ವಿಶ್ವನಾಥ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.</p>.<p>‘ವಿಶ್ವನಾಥ್ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿರುವ ಕಾರಣ ಸಂವಿಧಾನದ 164(1–ಬಿ) ಮತ್ತು 361–ಬಿ ಪ್ರಕಾರ ಅನರ್ಹತೆ ಮುಂದುವರಿದಿದೆ. ಕರ್ನಾಟಕ ವಿಧಾನಸಭೆಯ ಅವಧಿ ಮುಗಿಯುವ ತನಕ ಅದು ಇರಲಿದೆ. ಅಷ್ಟರಲ್ಲಿ ಅವರು ಶಾಸಕರಾಗಿ ಚುನಾಯಿತರಾದರೆ ಈ ಅನರ್ಹತೆ ಮುಂದುವರಿಯುವುದಿಲ್ಲ’ ಎಂದು ಹೈಕೋರ್ಟ್ ಹೇಳಿತ್ತು.</p>.<p>ವಿಶ್ವನಾಥ್ ಅವರು ಜೆಡಿಎಸ್ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ವಿಧಾನಸಭೆ ಸ್ಪೀಕರ್ ಆಗಿದ್ದ ಕೆ.ಆರ್. ರಮೇಶ್ಕುಮಾರ್ ಅವರು ಅನರ್ಹಗೊಳಿಸಿದ 17 ಶಾಸಕರಲ್ಲಿ ವಿಶ್ವನಾಥ್ ಕೂಡ ಒಬ್ಬರು. 2019ರ ಡಿಸೆಂಬರ್ನಲ್ಲಿ ನಡೆದ ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ವಿಶ್ವನಾಥ್ ಸೋಲನುಭವಿಸಿದ್ದರು. ಕಳೆದ ವರ್ಷ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>