ವಿಶ್ವನಾಥ್ ಅವರು ಜೆಡಿಎಸ್ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ವಿಧಾನಸಭೆ ಸ್ಪೀಕರ್ ಆಗಿದ್ದ ಕೆ.ಆರ್. ರಮೇಶ್ಕುಮಾರ್ ಅವರು ಅನರ್ಹಗೊಳಿಸಿದ 17 ಶಾಸಕರಲ್ಲಿ ವಿಶ್ವನಾಥ್ ಕೂಡ ಒಬ್ಬರು. 2019ರ ಡಿಸೆಂಬರ್ನಲ್ಲಿ ನಡೆದ ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ವಿಶ್ವನಾಥ್ ಸೋಲನುಭವಿಸಿದ್ದರು. ಕಳೆದ ವರ್ಷ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.