‘ಸಂಸ್ಕರಿಸದೇ ಇರುವ ತ್ಯಾಜ್ಯ ನೀರನ್ನು ನದಿ ಹಾಗೂ ಹಳ್ಳ, ಕೊಳ್ಳಗಳಿಗೆ ಹರಿಸಲಾಗುತ್ತಿದೆ. ಆ ಮೂಲಕ ಜಲಮೂಲಗಳನ್ನೇ ಕಲುಷಿತಗೊಳಿಸಲಾಗುತ್ತಿದ್ದು, ಇದರ ಮೇಲೆ ಅವಲಂಬಿತವಾಗಿರುವ ನಾಗರಿಕರು ಹಾಗೂ ಜೀವ ವೈವಿಧ್ಯತೆಯು ಅಪಾಯಕ್ಕೆ ಸಿಲುಕಿದೆ’ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಹಾಗೂ ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ ಆತಂಕ ವ್ಯಕ್ತಪಡಿಸಿದೆ.