ಅಪರಾಧಿಗೆ ಕಾನೂನುಬದ್ಧವಾಗಿ ಸಿಗಬೇಕಾದ ಹಕ್ಕಿನ ಕುರಿತು ಮಾಹಿತಿ ನೀಡುವಂತೆ, ಜೈಲು ಅಧಿಕಾರಿಗೆ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಎಂ.ಆರ್. ಶಾ ಅವರಿದ್ದ ಪೀಠ ನಿರ್ದೇಶನ ನೀಡಿತು.ಅಲ್ಲದೇ ಉತ್ತರ ಪ್ರದೇಶ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚನೆ ನೀಡಿದ ನ್ಯಾಯಪೀಠ, ವಕೀಲರ ತಂಡ ಎಲ್ಲಾ ಜೈಲುಗಳಿಗೂ ಭೇಟಿ ನೀಡಿ, ಅಪರಾಧಿಗಳು ಯಾವ ರೀತಿಯ ಅಪರಾಧಗಳಿಗೆ ಶಿಕ್ಷೆ ಪಡೆಯುತ್ತಿದ್ದಾರೆ ಮತ್ತು ಅವರಿಗೆ ನೀಡಲಾಗಿರುವ ಶಿಕ್ಷೆಯ ಅವಧಿ ಕುರಿತು ಮಾಹಿತಿ ಪಡೆಯಬೇಕು. ಜೊತೆಗೆ, ಅವಧಿಗೂ ಮುನ್ನ ಬಿಡುಗಡೆ ಪಡೆಯಲು ಅರ್ಜಿ ಸಲ್ಲಿಸುವ ಕುರಿತು ಅಪರಾಧಿಗಳಿಗೆ ತಿಳಿವಳಿಕೆ’ ನೀಡಬೇಕು ಎಂದಿದೆ.