<p><strong>ನವದೆಹಲಿ</strong>: ಕೋವಿಡ್ ಸೋಂಕಿನಿಂದಾಗಿ ತಂದೆ–ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಪಿ.ಎಂ–ಕೇರ್ಸ್ ನಿಧಿಯಡಿ ನೆರವು ಒದಗಿಸುವ ಯೋಜನೆ ಕುರಿತ ಕಾರ್ಯಸೂಚಿ ರೂಪಿಸಲು ಕೇಂದ್ರ ಸರ್ಕಾರಕ್ಕೆ ಇನ್ನಷ್ಟು ಕಾಲಾವಕಾಶವನ್ನು ಸುಪ್ರೀಂ ಕೋರ್ಟ್ ಸೋಮವಾರ ನೀಡಿತು.</p>.<p class="bodytext">ಪಶ್ಚಿಮ ಬಂಗಾಳ ಮತ್ತು ದೆಹಲಿ ಈ ನಿಟ್ಟಿನಲ್ಲಿ ಅಗತ್ಯವಿರುವ ಸಹಕಾರವನ್ನು ನೀಡುತ್ತಿಲ್ಲ. ಅನಾಥ ಮಕ್ಕಳ ಕುರಿತ ಮಾಹಿತಿಯನ್ನು ಇನ್ನೂ ಒದಗಿಸಿಲ್ಲ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣೆ ಆಯೋಗ (ಎನ್ಸಿಪಿಸಿಆರ್) ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಪೀಠಕ್ಕೆ ಮಾಹಿತಿ ನೀಡಿತು.</p>.<p>ನ್ಯಾಯಮೂರ್ತಿಗಳಾದ ಎಲ್.ಎನ್.ರಾವ್ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠದ ಎದುರು ಕೇಂದ್ರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು, ಪಿಎಂ ಕೇರ್ಸ್ ನೆರವು ಯೋಜನೆಯ ರೂಪುರೇಷೆ ಅಂತಿಮಗೊಳಿಸಲು ರಾಜ್ಯ ಸರ್ಕಾರಗಳ ಜೊತೆಗೆ ಮಾತುಕತೆ ನಡೆದಿದೆ ಎಂದು ತಿಳಿಸಿದರು.</p>.<p>ಎನ್ಸಿಪಿಸಿಆರ್ ಅನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಅವರು, ಪಶ್ಚಿಮ ಬಂಗಾಳ ಮತ್ತು ದೆಹಲಿ ವಿಷಯದಲ್ಲಿ ಸಮಸ್ಯೆಗಳಿವೆ. ಬಾಲ ಸ್ವರಾಜ್ ಯೋಜನೆ ಸೇರಿದಂತೆ ಕೆಲವೊಂದು ಅಂಕಿ ಅಂಶಗಳನ್ನು ಈ ಸರ್ಕಾರಗಳು ಒದಗಿಸುತ್ತಿಲ್ಲ ಎಂದು ತಿಳಿಸಿದರು.</p>.<p>ದೆಹಲಿ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಚಿರಾಗ್ ಶ್ರಾಫ್ ಅವರು, ದೆಹಲಿಯಲ್ಲಿ ಈ ಅಂಕಿ ಅಂಶವನ್ನು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಒದಗಿಸಲಿದೆ. ಉಳಿದೆಡೆ ಸಂಬಂಧಿತ ಇಲಾಖೆಗಳು ಒದಗಿಸಲಿವೆ ಎಂದರು. ಅಂಕಿ ಅಂಶ ಒದಗಿಸಲು ಕೋರಿ ಪೊಲೀಸ್, ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.</p>.<p>ಇದಕ್ಕೆ ಪೀಠವು, ದೆಹಲಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ಇದ್ದು, ಮಕ್ಕಳ ಅಗತ್ಯವನ್ನು ಆಧರಿಸಿ ಆದಷ್ಟುಶೀಘ್ರ ಮಾಹಿತಿಯನ್ನು ರವಾನಿಸಬೇಕು ಎಂದು ಅಭಿಪ್ರಾಯಪಟ್ಟಿತು.</p>.<p>ಸಂಬಂಧಿತ ಯೋಜನೆಗಳನ್ನು ಜಾರಿಗೊಳಿಸಲು ಕೋರ್ಟ್ ಆದೇಶಕ್ಕೆ ಕಾಯುತ್ತಾ ಕುಳಿತುಕೊಳ್ಳಬಾರದು. ಕೆಲ ಮಕ್ಕಳು 2020ರ ಮಾರ್ಚ್ನಲ್ಲಿಯೇ ಅನಾಥರಾಗಿದ್ದಾರೆ ಎಂದು ಪೀಠ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್ ಸೋಂಕಿನಿಂದಾಗಿ ತಂದೆ–ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಪಿ.ಎಂ–ಕೇರ್ಸ್ ನಿಧಿಯಡಿ ನೆರವು ಒದಗಿಸುವ ಯೋಜನೆ ಕುರಿತ ಕಾರ್ಯಸೂಚಿ ರೂಪಿಸಲು ಕೇಂದ್ರ ಸರ್ಕಾರಕ್ಕೆ ಇನ್ನಷ್ಟು ಕಾಲಾವಕಾಶವನ್ನು ಸುಪ್ರೀಂ ಕೋರ್ಟ್ ಸೋಮವಾರ ನೀಡಿತು.</p>.<p class="bodytext">ಪಶ್ಚಿಮ ಬಂಗಾಳ ಮತ್ತು ದೆಹಲಿ ಈ ನಿಟ್ಟಿನಲ್ಲಿ ಅಗತ್ಯವಿರುವ ಸಹಕಾರವನ್ನು ನೀಡುತ್ತಿಲ್ಲ. ಅನಾಥ ಮಕ್ಕಳ ಕುರಿತ ಮಾಹಿತಿಯನ್ನು ಇನ್ನೂ ಒದಗಿಸಿಲ್ಲ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣೆ ಆಯೋಗ (ಎನ್ಸಿಪಿಸಿಆರ್) ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಪೀಠಕ್ಕೆ ಮಾಹಿತಿ ನೀಡಿತು.</p>.<p>ನ್ಯಾಯಮೂರ್ತಿಗಳಾದ ಎಲ್.ಎನ್.ರಾವ್ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠದ ಎದುರು ಕೇಂದ್ರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು, ಪಿಎಂ ಕೇರ್ಸ್ ನೆರವು ಯೋಜನೆಯ ರೂಪುರೇಷೆ ಅಂತಿಮಗೊಳಿಸಲು ರಾಜ್ಯ ಸರ್ಕಾರಗಳ ಜೊತೆಗೆ ಮಾತುಕತೆ ನಡೆದಿದೆ ಎಂದು ತಿಳಿಸಿದರು.</p>.<p>ಎನ್ಸಿಪಿಸಿಆರ್ ಅನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಅವರು, ಪಶ್ಚಿಮ ಬಂಗಾಳ ಮತ್ತು ದೆಹಲಿ ವಿಷಯದಲ್ಲಿ ಸಮಸ್ಯೆಗಳಿವೆ. ಬಾಲ ಸ್ವರಾಜ್ ಯೋಜನೆ ಸೇರಿದಂತೆ ಕೆಲವೊಂದು ಅಂಕಿ ಅಂಶಗಳನ್ನು ಈ ಸರ್ಕಾರಗಳು ಒದಗಿಸುತ್ತಿಲ್ಲ ಎಂದು ತಿಳಿಸಿದರು.</p>.<p>ದೆಹಲಿ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಚಿರಾಗ್ ಶ್ರಾಫ್ ಅವರು, ದೆಹಲಿಯಲ್ಲಿ ಈ ಅಂಕಿ ಅಂಶವನ್ನು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಒದಗಿಸಲಿದೆ. ಉಳಿದೆಡೆ ಸಂಬಂಧಿತ ಇಲಾಖೆಗಳು ಒದಗಿಸಲಿವೆ ಎಂದರು. ಅಂಕಿ ಅಂಶ ಒದಗಿಸಲು ಕೋರಿ ಪೊಲೀಸ್, ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.</p>.<p>ಇದಕ್ಕೆ ಪೀಠವು, ದೆಹಲಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ಇದ್ದು, ಮಕ್ಕಳ ಅಗತ್ಯವನ್ನು ಆಧರಿಸಿ ಆದಷ್ಟುಶೀಘ್ರ ಮಾಹಿತಿಯನ್ನು ರವಾನಿಸಬೇಕು ಎಂದು ಅಭಿಪ್ರಾಯಪಟ್ಟಿತು.</p>.<p>ಸಂಬಂಧಿತ ಯೋಜನೆಗಳನ್ನು ಜಾರಿಗೊಳಿಸಲು ಕೋರ್ಟ್ ಆದೇಶಕ್ಕೆ ಕಾಯುತ್ತಾ ಕುಳಿತುಕೊಳ್ಳಬಾರದು. ಕೆಲ ಮಕ್ಕಳು 2020ರ ಮಾರ್ಚ್ನಲ್ಲಿಯೇ ಅನಾಥರಾಗಿದ್ದಾರೆ ಎಂದು ಪೀಠ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>