ನಾಲ್ವರ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದ ಬ್ಯಾಡರಹಳ್ಳಿ ಪೊಲೀಸರು, ಭಾರತಿ ಅವರ ಪತಿಯಾದ ಪತ್ರಕರ್ತ ಹಲ್ಲೆಗೆರೆ ಶಂಕರ್ ಹಾಗೂ ಇಬ್ಬರು ಅಳಿಯಂದಿರ ವಿರುದ್ಧ ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಅಳಿಯ ಇ.ಎಸ್.ಪ್ರವೀಣ್ ಕುಮಾರ್ ಅವರನ್ನು 2021ರ ಅಕ್ಟೋಬರ್ 1ರಂದು ಬಂಧಿಸಿದ್ದರು. ಶಂಕರ್ ಜಾಮೀನು ಅರ್ಜಿಯನ್ನು ಹೈಕೋರ್ಟ್ 2022ರ ಮೇ 19ರಂದು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಶಂಕರ್ ಸುಪ್ರೀಂ ಕೋರ್ಟ್
ಮೆಟ್ಟಿಲೇರಿದ್ದರು.