ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಮ್ಮದಿಯ ವಾತಾವರಣ ಹಾಳು ಮಾಡುತ್ತಿದ್ದಾರೆ: ಧರ್ಮ ಸಂಸತ್‌ ಬಗ್ಗೆ ‘ಸುಪ್ರೀಂ’ ಕಿಡಿ

ಅಕ್ಷರ ಗಾತ್ರ

ನವದೆಹಲಿ: ಹರಿದ್ವಾರದ ಧರ್ಮ ಸಂಸತ್‌ ಪ್ರಕರಣದಲ್ಲಿ ಬಂಧಿತನಾಗಿದ್ದ ಜಿತೇಂದ್ರ ತ್ಯಾಗಿಗೆ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರ ಎತ್ತಿಕೊಂಡಿತು.

ಈ ವೇಳೆ ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ವಿಕ್ರಮ್ ನಾಥ್ ಅವರನ್ನು ಒಳಗೊಂಡ ಪೀಠವು ತ್ಯಾಗಿ ಪರ ವಕೀಲ ಸಿದ್ಧಾರ್ಥ್ ಲೂತ್ರಾ ಅವರಿಗೆ ‘ಧರ್ಮ ಸಂಸತ್ ಎಂದರೇನು’ ಎಂದು ಪ್ರಶ್ನಿಸಿತು.

ಧಾರ್ಮಿಕ ಕಾರ್ಯಕ್ರಮಗಳ ಮೂಲಕ ದ್ವೇಷಪೂರಿತ ಭಾಷಣಗಳನ್ನು ಮಾಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.

ಧರ್ಮ ಸಂಸತ್‌ನಂತಹ ಕಾರ್ಯಕ್ರಮಗಳು ನೆಮ್ಮದಿಯ ವಾತಾವರಣವನ್ನು ಹಾಳು ಮಾಡುತ್ತಿವೆ ಎಂದೂ ಸುಪ್ರೀಂ ಕೋರ್ಟ್‌ ಕಿಡಿಕಾರಿತು.

ಜನರು ಶಾಂತಿಯುತವಾಗಿ ಬದುಕಲು ಜಾಗೃತಿ ಮೂಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನೂ ಸುರ್ಪೀಂ ಕೋರ್ಟ್‌ ವ್ಯಕ್ತಪಡಿಸಿತು.

‘ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡುವವರು ಸಂವೇದನಾಶೀಲರಾಗಿಲ್ಲ. ಅವರಿಂದ ನೆಮ್ಮದಿಯ ವಾತಾವರಣ ಹಾಳಾಗುತ್ತಿದೆ. ಜನರು ಶಾಂತಿಯುತವಾಗಿ ಒಟ್ಟಿಗೆ ಇರಬೇಕು. ಜೀವನವನ್ನು ಆನಂದಿಸಬೇಕು’ ಎಂದು ಪೀಠ ಹೇಳಿತು.

‘ಜನಾಂಗೀಯ ಶುದ್ಧೀಕರಣಕ್ಕಾಗಿ ಮುಸ್ಲಿಮರ ನರಮೇಧ ನಡೆಸಬೇಕು’ ಎಂದು ಜಿತೇಂದ್ರ ತ್ಯಾಗಿ ಕರೆ ಕೊಟ್ಟಿದ್ದ. ಈ ‘ದ್ವೇಷ ಭಾಷಣ’ದ ವಿರುದ್ಧ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಬೇಕು ಎಂದು ಕೆಲವು ಹಿರಿಯ ವಕೀಲರು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರಿಗೆ ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT