ಜೂನ್ 27 ಹಾಗೂ 29ರಂದು ಭೂಷಣ್ ಟ್ವೀಟ್ಗಳನ್ನು ಮಾಡಿದ್ದರು. ಕಳೆದ ಆರು ವರ್ಷಗಳಲ್ಲಿ 'ಭಾರತದ ಪ್ರಜಾಪ್ರಭುತ್ವದ ನಾಶ'ದಲ್ಲಿ ಸುಪ್ರೀಂ ಕೋರ್ಟ್ ಪಾತ್ರ ವಹಿಸಿದೆ ಎಂದು ಜೂನ್ 27ರಂದು ಭೂಷಣ್ ಮಾಡಿದ್ದ ಟ್ವೀಟ್ನಲ್ಲಿ ಉಲ್ಲೇಖಿಸಲಾಗಿತ್ತು. ಈ ಬಗ್ಗೆ ಗ್ವಾಲಿಯರ್ ಮೂಲದ ವಕೀಲರೊಬ್ಬರು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು. ಬಳಿಕ ಈ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿತ್ತು. ಅರುಣ್ ಮಿಶ್ರಾ ಅವರಿದ್ದ ನ್ಯಾಯಪೀಠವು ಜುಲೈ 22ರಂದು ಭೂಷಣ್ಗೆ ನೋಟಿಸ್ ನೀಡಿತ್ತು. ಈ ಮಧ್ಯೆ, ಭೂಷಣ್ ಮಾಡಿದ್ದ ಟ್ವೀಟ್ಗಳನ್ನು ಟ್ವಿಟರ್ ಅಳಿಸಿಹಾಕಿತ್ತು.