ಅದಕ್ಕೂ ಮುನ್ನ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್, ‘ಕುಲಾಂತರಿ ಸಾಸಿವೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 2016 ಮತ್ತು 2017ರಲ್ಲಿ ಆದೇಶ ಹೊರಡಿಸಿತ್ತು. ಆ ಪ್ರಕಾರ, ಈ ಸಂಬಂಧ ಕೈಗೊಳ್ಳುವ ಯಾವುದೇ ನಿರ್ಧಾರವನ್ನು ನ್ಯಾಯಾಲಯದ ಮುಂದೆ ಇರಿಸ
ಬೇಕಿತ್ತು. ಹಾಗೆ ಮಾಡದೇ ಇರುವ ಕಾರಣ, ಜಿಇಎಸಿಯ ನಿರ್ಧಾರವನ್ನು ರದ್ದುಪಡಿಸಬೇಕು’ ಎಂದು ಅವರು
ಪ್ರತಿಪಾದಿಸಿದರು.