<p><strong>ನವದೆಹಲಿ: </strong>ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಬಳ್ಳಾರಿ ಭೇಟಿಗೆ ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.</p>.<p>ಬಳ್ಳಾರಿ ಹಾಗೂ ಆಂಧ್ರದ ಅನಂತಪುರ ಮತ್ತು ಕಡಪ ಜಿಲ್ಲೆಗಳಿಗೆ ಭೇಟಿ ನೀಡದಂತೆ ಜಾಮೀನು ನೀಡುವಾಗ ವಿಧಿಸಲಾಗಿದ್ದ ಷರತ್ತನ್ನು ಮಾರ್ಪಡಿಸುವುದಾಗಿ ನ್ಯಾಯಮೂರ್ತಿ ವಿನೀತ್ ಶರಣ್ ನೇತೃತ್ವದ ಪೀಠ ಹೇಳಿದ್ದು, ಎಂಟು ವಾರಗಳ ಕಾಲ ತಮ್ಮ ಊರಾದ ಬಳ್ಳಾರಿಗೆ ರೆಡ್ಡಿ ಭೇಟಿ ನೀಡಬಹುದಾಗಿದೆ.</p>.<p>ಷರತ್ತು ಸಡಿಲಗೊಳಿಸುವಂತೆ ಕೋರಿ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಧವಿ ದಿವಾನ್, ಆರೋಪಿಗೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದರೆ, 47 ಜನ ಸಾಕ್ಷಿದಾರರು ಭಯಭೀತರಾಗಲಿದ್ದಾರೆ ಎಂದು ವಾದ ಮಂಡಿಸಿದರು.</p>.<p><a href="https://www.prajavani.net/karnataka-news/shuchi-scheme-sanatory-napkin-pad-will-be-distribute-to-government-school-and-college-girls-859108.html" itemprop="url">ಶುಚಿ ಯೋಜನೆ: ಸರ್ಕಾರಿ ಶಾಲಾ-ಕಾಲೇಜುಗಳ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ಪ್ಯಾಡ್ </a></p>.<p>ರೆಡ್ಡಿ ಅನ್ಯರ ಗಣಿಗಳಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ್ದಾರೆ. ಸಾಕ್ಷಿಗಳನ್ನು ಬೆದರಿಸಿದರೆ ಪ್ರಕರಣವೇ ಬದಲಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿ ಬೆದರಿಕೆ ಹಾಕಿದ್ದಾರೆಂದು ಈಗಾಗಲೇ ವ್ಯಕ್ತಿಯೊಬ್ಬರು ಪತ್ರ ಬರೆದು ದೂರಿದ್ದಾರೆ ಎಂದು ಅವರು ಪೀಠಕ್ಕೆ ತಿಳಿಸಿದರು.</p>.<p>ಅಲ್ಲದೆ, ಜಾಮೀನಿಗಾಗಿ ನ್ಯಾಯಾಧೀಶರಿಗೆ ಲಂಚ ನೀಡಿರುವ ಪ್ರಕರಣದಲ್ಲೂ ರೆಡ್ಡಿ ಆರೋಪಿಯಾಗಿದ್ದಾರೆ ಎಂದು ಅವರು ಹೇಳಿದರು.</p>.<p>ಸಿಬಿಐನ ಈ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೆಡ್ಡಿ ಪರ ವಕೀಲ ಮುಕುಲ್ ರೋಹಟ್ಗಿ, ಆರೋಪಿಯು ಇದುವರೆಗೆ ಜಾಮೀನಿನ ಷರತ್ತನ್ನು ಉಲ್ಲಂಘಿಸಿಲ್ಲ ಎಂದರು.</p>.<p><a href="https://www.prajavani.net/world-news/earthquake-of-45-magnitude-strikes-afghanistan-859081.html" itemprop="url">ತಾಲಿಬಾನ್ ವಶವಾದ ಅಫ್ಗಾನಿಸ್ತಾನದಲ್ಲಿ ಭೂಕಂಪ </a></p>.<p>ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜೈಲು ಪಾಲಾಗಿದ್ದ ಜನಾರ್ದನ ರೆಡ್ಡಿ ಅವರ ಬಳ್ಳಾರಿ ಜಿಲ್ಲೆಯ ಪ್ರವೇಶ ನಿರ್ಬಂಧಿಸಿ ನ್ಯಾಯಪೀಠವು 2015ರಲ್ಲಿ ಜಾಮೀನು ಮಂಜೂರು ಮಾಡಿತ್ತು.</p>.<p>ಪುತ್ರಿಯ ಮದುವೆ ಹಾಗೂ ಇತರ ಸಂದರ್ಭ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಪೀಠ ಈ ಹಿಂದೆ ಅನುಮತಿ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಬಳ್ಳಾರಿ ಭೇಟಿಗೆ ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.</p>.<p>ಬಳ್ಳಾರಿ ಹಾಗೂ ಆಂಧ್ರದ ಅನಂತಪುರ ಮತ್ತು ಕಡಪ ಜಿಲ್ಲೆಗಳಿಗೆ ಭೇಟಿ ನೀಡದಂತೆ ಜಾಮೀನು ನೀಡುವಾಗ ವಿಧಿಸಲಾಗಿದ್ದ ಷರತ್ತನ್ನು ಮಾರ್ಪಡಿಸುವುದಾಗಿ ನ್ಯಾಯಮೂರ್ತಿ ವಿನೀತ್ ಶರಣ್ ನೇತೃತ್ವದ ಪೀಠ ಹೇಳಿದ್ದು, ಎಂಟು ವಾರಗಳ ಕಾಲ ತಮ್ಮ ಊರಾದ ಬಳ್ಳಾರಿಗೆ ರೆಡ್ಡಿ ಭೇಟಿ ನೀಡಬಹುದಾಗಿದೆ.</p>.<p>ಷರತ್ತು ಸಡಿಲಗೊಳಿಸುವಂತೆ ಕೋರಿ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಧವಿ ದಿವಾನ್, ಆರೋಪಿಗೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದರೆ, 47 ಜನ ಸಾಕ್ಷಿದಾರರು ಭಯಭೀತರಾಗಲಿದ್ದಾರೆ ಎಂದು ವಾದ ಮಂಡಿಸಿದರು.</p>.<p><a href="https://www.prajavani.net/karnataka-news/shuchi-scheme-sanatory-napkin-pad-will-be-distribute-to-government-school-and-college-girls-859108.html" itemprop="url">ಶುಚಿ ಯೋಜನೆ: ಸರ್ಕಾರಿ ಶಾಲಾ-ಕಾಲೇಜುಗಳ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ಪ್ಯಾಡ್ </a></p>.<p>ರೆಡ್ಡಿ ಅನ್ಯರ ಗಣಿಗಳಲ್ಲಿ ಅಕ್ರಮ ಗಣಿಗಾರಿಕೆ ಮಾಡಿದ್ದಾರೆ. ಸಾಕ್ಷಿಗಳನ್ನು ಬೆದರಿಸಿದರೆ ಪ್ರಕರಣವೇ ಬದಲಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿ ಬೆದರಿಕೆ ಹಾಕಿದ್ದಾರೆಂದು ಈಗಾಗಲೇ ವ್ಯಕ್ತಿಯೊಬ್ಬರು ಪತ್ರ ಬರೆದು ದೂರಿದ್ದಾರೆ ಎಂದು ಅವರು ಪೀಠಕ್ಕೆ ತಿಳಿಸಿದರು.</p>.<p>ಅಲ್ಲದೆ, ಜಾಮೀನಿಗಾಗಿ ನ್ಯಾಯಾಧೀಶರಿಗೆ ಲಂಚ ನೀಡಿರುವ ಪ್ರಕರಣದಲ್ಲೂ ರೆಡ್ಡಿ ಆರೋಪಿಯಾಗಿದ್ದಾರೆ ಎಂದು ಅವರು ಹೇಳಿದರು.</p>.<p>ಸಿಬಿಐನ ಈ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೆಡ್ಡಿ ಪರ ವಕೀಲ ಮುಕುಲ್ ರೋಹಟ್ಗಿ, ಆರೋಪಿಯು ಇದುವರೆಗೆ ಜಾಮೀನಿನ ಷರತ್ತನ್ನು ಉಲ್ಲಂಘಿಸಿಲ್ಲ ಎಂದರು.</p>.<p><a href="https://www.prajavani.net/world-news/earthquake-of-45-magnitude-strikes-afghanistan-859081.html" itemprop="url">ತಾಲಿಬಾನ್ ವಶವಾದ ಅಫ್ಗಾನಿಸ್ತಾನದಲ್ಲಿ ಭೂಕಂಪ </a></p>.<p>ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜೈಲು ಪಾಲಾಗಿದ್ದ ಜನಾರ್ದನ ರೆಡ್ಡಿ ಅವರ ಬಳ್ಳಾರಿ ಜಿಲ್ಲೆಯ ಪ್ರವೇಶ ನಿರ್ಬಂಧಿಸಿ ನ್ಯಾಯಪೀಠವು 2015ರಲ್ಲಿ ಜಾಮೀನು ಮಂಜೂರು ಮಾಡಿತ್ತು.</p>.<p>ಪುತ್ರಿಯ ಮದುವೆ ಹಾಗೂ ಇತರ ಸಂದರ್ಭ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಪೀಠ ಈ ಹಿಂದೆ ಅನುಮತಿ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>