ನವದೆಹಲಿ: ಕೇರಳದಲ್ಲಿ ಹನ್ನೊಂದನೆಯ ತರಗತಿ ಪರೀಕ್ಷೆಗಳನ್ನು ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಕೋವಿಡ್–19 ಪ್ರಕರಣಗಳ ಹೆಚ್ಚಳದ ನಡುವೆಯೂ ಕೇರಳ ಸರ್ಕಾರ ಸೆಪ್ಟೆಂಬರ್ 6ರಿಂದ ಭೌತಿಕವಾಗಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿತ್ತು.
ಪರೀಕ್ಷೆನಡೆಸುವುದಕ್ಕೆ ಸಂಬಂಧಿಸಿದ ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 13ಕ್ಕೆ ನಿಗದಿ ಪಡಿಸಿದೆ.
ನಿತ್ಯ ಕೋವಿಡ್–19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಕೇರಳದಲ್ಲಿ ಅಪಾಯದ ಪರಿಸ್ಥಿತಿ ಎದುರಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. 24 ಗಂಟೆಗಳ ಅಂತರದಲ್ಲಿ ಕೋವಿಡ್ ದೃಢಪಟ್ಟ ಸುಮಾರು 35,000 ಪ್ರಕರಣಗಳು ದಾಖಲಾಗುತ್ತಿದ್ದು, ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.